Home ಟಾಪ್ ಸುದ್ದಿಗಳು ದಸರಾದಲ್ಲಿ ಬ್ಯಾರಿ ಕವನ ವಾಚನಕ್ಕೆ ಅವಕಾಶ

ದಸರಾದಲ್ಲಿ ಬ್ಯಾರಿ ಕವನ ವಾಚನಕ್ಕೆ ಅವಕಾಶ

ಮೈಸೂರು: ಬ್ಯಾರಿ ಸಮುದಾಯದ ಪ್ರಮುಖರ ಆಗ್ರಹದ ಹಿನ್ನೆಲೆಯಲ್ಲಿ ಮೈಸೂರು ದಸರಾ ಉತ್ಸವದ ಪ್ರಧಾನ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಯ ಕವಿತೆಯ ವಾಚನಕ್ಕೆ ಅವಕಾಶ ಒದಗಿಸಲಾಗಿದೆ.
ಮಂಗಳೂರಿನ ಬ್ಯಾರಿ ಕವಿ ಬಿ.ಎ.ಮುಹಮ್ಮದಾಲಿ ಕಮ್ಮರಡಿ ಅವರು ಅಕ್ಟೋಬರ್ 3 ರಂದು ಮೈಸೂರು ವಿಶ್ವವಿದ್ಯಾಲಯದ ಸೆನೆಟ್ ಹಾಲ್ ನಲ್ಲಿ ನಡೆಯಲಿರುವ ಪ್ರಧಾನ ಕವಿಗೋಷ್ಠಿಯಲ್ಲಿ ಬ್ಯಾರಿ ಕವಿತೆಯನ್ನು ವಾಚಿಸಲಿದ್ದಾರೆ. ದಸರಾ ಕವಿಗೋಷ್ಠಿ ಉಪಸಮಿತಿಯಿಂದ ಅವರಿಗೆ ಗುರುವಾರ ಅಧಿಕೃತ ಆಹ್ವಾನವನ್ನು ನೀಡಲಾಗಿದೆ.

ದಸರಾ ಪ್ರಧಾನ ಕವಿಗೋಷ್ಠಿಯಲ್ಲಿ ರಾಜ್ಯದ ಇತರೆಲ್ಲ ಭಾಷೆಗಳಿಗೆ ಅವಕಾಶ ನೀಡಿದ್ದರೂ ಬ್ಯಾರಿ ಭಾಷೆಗೆ ಅವಕಾಶ ನೀಡಿರಲಿಲ್ಲ. ಹಿರಿಯ ಪತ್ರಕರ್ತ ಬಿ.ಎಂ.ಹನೀಫ್, ಬೆಂಗಳೂರು ಬ್ಯಾರೀಸ್ ವೆಲ್ ಫೇರ್ ಅಸೋಸಿಯೇಷನ್ ನ ಪ್ರಧಾನ ಕಾರ್ಯದರ್ಶಿ ಟಿ.ಕೆ.ಷರೀಫ್ ಸಹಿತ ಹಲವು ಗಣ್ಯರು ಸರಕಾರದ ತಾರತಮ್ಯ ನೀತಿಯನ್ನು ಕಟುವಾಗಿ ಟೀಕಿಸಿ ಹೇಳಿಕೆ ನೀಡಿದ್ದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೂ ಬ್ಯಾರಿ ಭಾಷೆಗೆ ಕವಿಗೋಷ್ಠಿಯಲ್ಲಿ ಪ್ರಾತಿನಿಧ್ಯ ಒದಗಿಸದೇ ಇರುವುದಕ್ಕೇ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಮೈಸೂರಿನ ಬ್ಯಾರೀಸ್ ವೆಲ್ ಫೇರ್ ಅಸೋಸಿಯೇಶನ್ ನ ಅಧ್ಯಕ್ಷ ಹಮೀದ್ ಹಾಜಿಯವರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಬುಧವಾರ ದಸರಾ ಉಪ ಸಮಿತಿಯ ಅಧ್ಯಕ್ಷರನ್ನು ಭೇಟಿಯಾಗಿ ಬ್ಯಾರಿ ಕವಿತೆಗೆ ಪ್ರಾತಿನಿಧ್ಯ ನೀಡಬೇಕೆಂದು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ದಸರಾ ಪರಧಾನ ಕವಿಗೋಷ್ಠಿಯಲ್ಲಿ ಬ್ಯಾರಿ ಕವಿಯೊಬ್ಬರಿಗೆ ಪ್ರಾತಿನಿಧ್ಯ ನೀಡಲು ಉಪಸಮಿತಿ ನಿರ್ಧರಿಸಿದೆ.

Join Whatsapp
Exit mobile version