‘ಅಗ್ನಿವೀರ’ರಿಗೆ ಉದ್ಯೋಗ ನೀಡುವುದಾಗಿ ಆಫರ್ ಕೊಟ್ಟ ಆನಂದ್ ಮಹೀಂದ್ರಾ

Prasthutha|

ನವದೆಹಲಿ: ಅಗ್ನಿಪಥ್ ಯೋಜನೆಯಡಿ ನೇಮಕಗೊಳ್ಳುವ ಅಗ್ನಿವೀರರಿಗೆ ನಾಲ್ಕು ವರ್ಷಗಳ ಸೇವೆಯ ನಂತರ ತಮ್ಮ ಕಂಪನಿಗಳಲ್ಲಿ ಉದ್ಯೋಗ ಅವಕಾಶ ನೀಡುವುದಾಗಿ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ತಿಳಿಸಿದ್ದಾರೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅಗ್ನಿಪಥ್ ಯೋಜನೆ ಘೋಷಣೆಯ ನಂತರ ನಡೆಯುತ್ತಿರುವ ಹಿಂಸಾಚಾರದಿಂದ ನನಗೆ ಬೇಸರವಾಗಿದೆ. ಕಳೆದ ವರ್ಷ ಈ ಯೋಜನೆಯನ್ನು ಪರಿಗಣಿಸಿದಾಗ, ಅಗ್ನಿವೀರರಿಗೆ ಸಿಗುವ ಶಿಸ್ತು ಮತ್ತು ಕೌಶಲ್ಯಗಳು ಅವನನ್ನು ಗಮನಾರ್ಹವಾಗಿ ಉದ್ಯೋಗಿಯನ್ನಾಗಿ ಮಾಡುತ್ತದೆ ಎಂದು ನಾನು ಹೇಳಿದ್ದೆ. ಮಹೀಂದ್ರಾ ಗ್ರೂಪ್ ಅಂತಹ ತರಬೇತಿ ಪಡೆದ ಸಮರ್ಥ ಯುವಕರಿಗೆ ನೇಮಕಾತಿ (ಉದ್ಯೋಗ) ಅವಕಾಶವನ್ನು ನೀಡುತ್ತದೆ ಎಂದಿದ್ದಾರೆ.

Join Whatsapp
Exit mobile version