Home ಟಾಪ್ ಸುದ್ದಿಗಳು ಟ್ರೋಲ್ ಗೆ ಒಳಗಾಗಿ ಮಹಿಳೆ ಆತ್ಮಹತ್ಯೆ: ₹20 ಲಕ್ಷ ಪರಿಹಾರ ಘೋಷಿಸಿದ ಆಂಧ್ರ ಸಿಎಂ

ಟ್ರೋಲ್ ಗೆ ಒಳಗಾಗಿ ಮಹಿಳೆ ಆತ್ಮಹತ್ಯೆ: ₹20 ಲಕ್ಷ ಪರಿಹಾರ ಘೋಷಿಸಿದ ಆಂಧ್ರ ಸಿಎಂ

ಅಮರಾವತಿ: ವೈಎಸ್ ಆರ್ಸಿಪಿ ಸರ್ಕಾರವನ್ನು ಹೊಗಳಿದ್ದಕ್ಕಾಗಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಯ ಕುಟುಂಬಕ್ಕೆ ₹20 ಲಕ್ಷ ಪರಿಹಾರ ನೀಡುವುದಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದಾರೆ.


ಮಾರ್ಚ್ 7ರಂದು ಗುಂಟೂರು ಜಿಲ್ಲೆಯ ತೆನಾಲಿ ರೈಲು ನಿಲ್ದಾಣದಲ್ಲಿ ಗೀತಾಂಜಲಿ ಎಂಬುವರು ಚಲಿಸುತ್ತಿದ್ದ ರೈಲಿನಡಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ಮೂರು ದಿನಗಳ ಬಳಿಕ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.


‘ಜಗನ್ ಮೋಹನ್ ರೆಡ್ಡಿ ಅವರು ಗೀತಾಂಜಲಿ ಅವರ ಆತ್ಮಹತ್ಯೆ ಕುರಿತು ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ₹20 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಜತೆಗೆ, ವಿರೋಧ ಪಕ್ಷಗಳ ಕಾರ್ಯಕರ್ತರಿಂದ ಟ್ರೋಲ್ ಗೆ ಒಳಗಾಗಿ ಗೀತಾಂಜಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿರುವ ಕುಟುಂಬಸ್ಥರಿಗೆ ಅಗತ್ಯ ಬೆಂಬಲ ನೀಡುವಂತೆಯೂ ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

Join Whatsapp
Exit mobile version