SSLC ಪರೀಕ್ಷೆಯಲ್ಲಿ ಅಂಕಿತ ಬಸಪ್ಪ ರಾಜ್ಯಕ್ಕೆ ಪ್ರಥಮ: ಹೆಮ್ಮೆಯ ಸಂಗತಿ ಎಂದ ಅಬ್ದುಲ್ ಮಜೀದ್

Prasthutha|

ಬೆಂಗಳೂರು: ಸರ್ಕಾರಿ ಶಾಲೆಯಲ್ಲಿ ಕಲಿತು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತ ಬಸಪ್ಪಳಿಗೆ ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅಭಿನಂದನೆ ಸಲ್ಲಿಸಿದ್ದಾರೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬಾಗಲಕೋಟೆ ಜಿಲ್ಲೆಯ ಮುಧೋಳದ ಮಳ್ಳಿಗೆರೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾ ಬಸಪ್ಪ ಕೊನ್ನೂರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿ. ಅಂಕಿತಾ ಬಸಪ್ಪ ಮತ್ತು ಅವರ ಪೋಷಕರಿಗೆ ಹಾಗೂ ಮಳ್ಳಿಗೆರೆ ಮೊರಾರ್ಜಿ ದೇಸಾಯಿ ಶಾಲೆಯ ಶಿಕ್ಷಕರಿಗೆ ಅಭಿನಂದನೆಗಳು. ಮುಂದಿನ ಉನ್ನತ ವಿದ್ಯಾಭ್ಯಾಸವು ಮತ್ತಷ್ಟು ದೊಡ್ಡಮಟ್ಟದ ಯಶಸ್ಸು ಸಿಗಲಿ ಎಂದು ಆಶಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Join Whatsapp