ಮಾಧ್ಯಮಗಳನ್ನು ಬಿಜೆಪಿಯ ನಿಯಂತ್ರಣಕ್ಕೆ ತರಲಿದ್ದೇವೆ: ವಿವಾದಾತ್ಮಕ ಹೇಳಿಕೆ ನೀಡಿದ ಅಣ್ಣಾ ಮಲೈ

Prasthutha|

ಚೆನ್ನೈ: ಮಾಧ್ಯಮಗಳನ್ನು ಬಿಜೆಪಿಯ ನಿಯಂತ್ರಣಕ್ಕೆ ತರಲಿದ್ದೇವೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

- Advertisement -

ತಮಿಳುನಾಡಿನಲ್ಲಿ ನಡೆದ ಬಿಜೆಪಿಯ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು ‘ಮಾಧ್ಯಮವನ್ನು ಮರೆತುಬಿಡಿ. ಅವರು ನಮ್ಮ ಬಗ್ಗೆ ಅಪವಾದ ಮಾಡುತ್ತಿರುವುದನ್ನು ಚಿಂತಿಸಬೇಡಿ. ಮುಂದಿನ ಆರು ತಿಂಗಳಲ್ಲಿ ಮಾಧ್ಯಮಗಳು ಬಿಜೆಪಿಯ ನಿಯಂತ್ರಣದಲ್ಲಿರುತ್ತವೆ” ಎಂದು ಹೇಳಿದ್ದಾರೆ. ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ,ಕೇಂದ್ರ ಸಚಿವ ಎಲ್ ಮುರುಗನ್ ಮಾಧ್ಯಮಗಳನ್ನು ನಿಯಂತ್ರಿಸಲಿದ್ದಾರೆ ಎಂದು ಅಣ್ಣಾಮಲೈ ಹೇಳಿದ್ದಾರೆ.

ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಈ ಹಿಂದೆ ತನ್ನ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದ್ದರು. ಎಲ್. ಮುರುಗನ್ ಕೇಂದ್ರ ಸಚಿವರಾದಾಗ ಅಣ್ಣಾಮಲೈ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.

Join Whatsapp