ಆಂಧ್ರ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಸಹೋದರಿಯಿಂದ ಹೊಸ ರಾಜಕೀಯ ಪಕ್ಷ ಘೋಷಣೆ

Prasthutha|

ಹೈದರಾಬಾದ್: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ ರೆಡ್ಡಿ ಅವರ ಪುತ್ರಿ ಮತ್ತು ಈಗಿನ ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ ಅವರ ಸಹೋದರಿ ವೈ.ಎಸ್. ಶರ್ಮಿಳಾ ರೆಡ್ಡಿ ರಾಜಕೀಯಕ್ಕೆ ಪ್ರವೇಶಿಸಿದ್ದಾರೆ. ಇದರೊಂದಿಗೆ ಹೊಸ ಪಕ್ಷವನ್ನು ರಚಿಸಿ ತೆಲಂಗಾಣದಲ್ಲಿ ಸಕ್ರಿಯರಾಗಲು ಶರ್ಮಿಳಾ ತೀರ್ಮಾನಿಸಿದ್ದಾರೆ.

- Advertisement -

ರಾಜಶೇಖರ ರೆಡ್ಡಿ ಅವರ ಹುಟ್ಟುಹಬ್ಬದ ದಿನವಾದ ಜುಲೈ 8 ರಂದು ಹೊಸ ಪಕ್ಷವನ್ನು ಅನಾವರಣಗೊಳಿಸುವುದಾಗಿ ಶರ್ಮಿಳಾ ತಿಳಿಸಿದ್ದಾರೆ. ಜನರ ಸೇವೆ ಮಾಡಲು ಶರ್ಮಿಳಾ ಅವರು ನಿರ್ಧರಿಸಿರುವುದು ನನಗೆ ಅಪಾರ ಸಂತೋಷವನ್ನುಂಟು ಮಾಡಿದೆ, ತಂದೆಯ ಧೈರ್ಯ ತನ್ನ ಮಗಳಿಗೆ ಇದೆ ಎಂದು ತಾಯಿ ವೈ.ಎಸ್. ವಿಜಯಲಕ್ಷ್ಮಿ ಪ್ರತಿಕ್ರಿಯಿಸಿದ್ದಾರೆ.

ಜುಲೈ 8 ರಂದು ಹೊಸ ಪಕ್ಷದ ಹೆಸರು, ಲೋಗೊ ಮತ್ತು ಧ್ವಜವನ್ನು ಅನಾವರಣಗೊಳಿಸಲಾಗುವುದು. 2023 ರ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿಯೂ ಶರ್ಮಿಳಾ ಹೇಳಿದ್ದಾರೆ. ಆದರೆ, ಜಗನ್ಮೋಹನ್ ರೆಡ್ಡಿ ತನ್ನ ಸಹೋದರಿಯ ನಿರ್ಧಾರದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

Join Whatsapp