ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಮತ್ತೆ ಅಪಘಾತ| ಯುವತಿ ಸಾವು; ಬೈಕ್ ಸವಾರ ಗಂಭೀರ

Prasthutha|

- Advertisement -


ಮಂಡ್ಯ: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತ ಸಂಭವಿಸಿ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಸವಾರನ ಸ್ಥಿತಿ ಚಿಂತಾಜನಕವಾಗಿದೆ.

- Advertisement -

ಇತ್ತೀಚೆಗಷ್ಟೇ ಇದೇ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ತಾಯಿ-ಮಗ ಮೃತಪಟ್ಟಿದ್ದರು.
ತಮಿಳುನಾಡು ಮೂಲದ ಪ್ರಿಯಾಂಕ ರಾಜು(32) ಮೃತ ಯುವತಿ. ಹಾಸನದ ದಾಸನಕೊಪ್ಪಲುವಿನ ಬೈಕ್ ಸವಾರ ಲಕ್ಷ್ಮೀನಾರಾಯಣ ಗೌಡ ಪರಿಸ್ಥಿತಿ ಗಂಭೀರವಾಗಿದೆ.


ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ಬೈಕ್​ ನಿಯಂತ್ರಣ ತಪ್ಪಿದೆ. ಅಪಘಾತದ ರಭಸಕ್ಕೆ ಸವಾರನ ಕುತ್ತಿಗೆ ಸೀಳಿ, ಎಡಗೈ ತುಂಡಾಗಿದೆ. ಇವರಿಬ್ಬರು ಬೆಂಗಳೂರಿನ ಟಿಸಿಎಸ್ ಕಂಪನಿಯಲ್ಲಿ ಸಹೋದ್ಯೋಗಿಗಳಾಗಿದ್ದು, ಬೈಕ್​​ನಲ್ಲಿ ಮೈಸೂರು ಪ್ರವಾಸಕ್ಕೆಂದು ಹೋಗಿದ್ದರು. ವಾಪಸ್ ಬೆಂಗಳೂರಿಗೆ ಬರುವಾಗ ಅಪಘಾರ ಸಂಭವಿಸಿದೆ.


ಲಕ್ಷ್ಮೀನಾರಾಯಣ ಗೌಡಗೆ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನಿಸಲಾಗಿದೆ. ಕೋಮಾ ಸ್ಥಿತಿಯಲ್ಲಿರುವ ಬೈಕ್ ಸವಾರ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಯುವತಿಯ ಶವವನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಮದ್ದೂರು ಸಂಚಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Join Whatsapp