ವಯನಾಡ್ ದುರಂತದಲ್ಲಿ ಕುಟುಂಬವನ್ನೇ ಕಳೆದುಕೊಂಡಿದ್ದ ಯುವತಿಗೆ ಮತ್ತೊಂದು ಶಾಕ್..!

Prasthutha|

ಮೆಪ್ಪಾಡಿ: ಕಳೆದ ತಿಂಗಳಲ್ಲಿ ಕೇರಳದ ವಯನಾಡ್ ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ತನ್ನ ಕುಟುಂಬ ಸದಸ್ಯರನ್ನೇ ಕಳೆದುಕೊಂಡಿದ್ದ ಯುವತಿಗೆ ಇದೀಗ ಮತ್ತೊಂದು ಆಘಾತ ಎದುರಾಗಿದೆ.

- Advertisement -

ಭೂಕುಸಿತದಲ್ಲಿ ತನ್ನ ಕುಟುಂಬದ ಒಂಬತ್ತು ಮಂದಿಯನ್ನು ಕಳೆದುಕೊಂಡಿದ್ದ ಶ್ರುತಿಗೆ ಡಿಸೆಂಬರ್ ನಲ್ಲಿ ಮದುವೆ ನಿಶ್ಚಯವಾಗಿದ್ದು ಇದೀಗ ಶ್ರುತಿಯ ಕೈಹಿಡಿಯಲಿದ್ದ ಹುಡುಗ ಜೆನ್ಸನ್ ಮಂಗಳವಾರ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಬುಧವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ,

ಇದರೊಂದಿಗೆ ತನ್ನ ಕುಟುಂಬ ಸದಸ್ಯರನ್ನು ಕಳೆದುಕೊಂಡ ದುಃಖದಲ್ಲಿದ್ದ ಶ್ರುತಿಗೆ ಭಾವಿ ಪತಿಯ ಸಾವಿನ ಸುದ್ದಿ ಬರಸಿಡಿಲು ಬಡಿದಂತಾಗಿದೆ.

- Advertisement -

ಶ್ರುತಿ ಹಾಗೂ ಜೆನ್ಸನ್ ಮದುವೆ ನಿಶ್ಚಯವಾಗಿತ್ತು. ಇದರ ನಡುವೆ ಆಗಸ್ಟ್ ನಲ್ಲಿ ವಯನಾಡ್, ಮೆಪ್ಪಾಡಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಶ್ರುತಿ ಕುಟುಂಬದ ಒಂಬತ್ತು ಮಂದಿ ಸಾವನ್ನಪ್ಪಿದ್ದರು. ಭೂಕುಸಿತದಲ್ಲಿ ಶ್ರುತಿ ಅವರ ಮನೆಯೂ ಕೊಚ್ಚಿ ಹೋಗಿತ್ತು ಅಷ್ಟು ಮಾತ್ರವಲ್ಲದೆ ಮದುವೆಗೆಂದು ಇರಿಸಿದ್ದ 4 ಲಕ್ಷ ನಗದು, 15 ಪವನ್ ಚಿನ್ನವೂ ಮಣ್ಣುಪಾಲಾಗಿ ಹೋಗಿದೆ.
ಇದೆಲ್ಲ ನಡೆದು ನಲವತ್ತೊಂದು ದಿನದ ಬಳಿಕ ಶ್ರುತಿಯ ಸಂಬಂಧಿಕರು ಮದುವೆಯ ತಯಾರಿಗೆ ಮುಂದಾಗಿದ್ದಾರೆ ಈ ನಡುವೆ ತಮ್ಮವರನ್ನೆಲ್ಲಾ ಕಳೆದುಕೊಂಡು ಬೇಸರದಲ್ಲಿರುವ ಸಮಯದಲ್ಲಿ ಅದ್ದೂರಿಯಾಗಿ ಮದುವೆಯಾಗುವುದು ಬೇಡ ಎಂದು ಶ್ರುತಿ ಹಾಗೂ ಜೆನ್ಸನ್ ರಿಜಿಸ್ಟರ್ ಮದುವೆಯಾಗಲು ನಿರ್ಧರಿಸಿದ್ದರು ಎಂದು ತಿಳಿದು ಬಂದಿದೆ.



Join Whatsapp