ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ಪಶ್ಚಿಮ ಬಂಗಾಳದಲ್ಲೂ ನಿರ್ಣಯ ಮಂಡನೆಗೆ ಮುಂದಾದ ಮಮತಾ ಬ್ಯಾನರ್ಜಿ

Prasthutha|

ಕೊಲ್ಕತಾ : ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ನಿರ್ಣಯ ಮಂಡಿಸಲು ಪಶ್ಚಿಮ ಬಂಗಾಳ ಕೂಡ ವಿಶೇಷ ಅಧಿವೇಶನ ನಡೆಸಲಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಈಗಾಗಲೇ ಕೇರಳದಲ್ಲಿ ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧ ವಿಶೇಷ ಅಧಿವೇಶನದಲ್ಲಿ ಕೈಗೊಳ್ಳಲಾಗಿದೆ.

- Advertisement -

“ಮೂರು ನೂತನ ಕೃಷಿ ಕಾನೂನುಗಳ ವಿರುದ್ಧ ನಿರ್ಣಯ ಅಂಗೀಕರಿಸಲು ಶೀಘ್ರವೇ ವಿಶೇಷ ಅಧಿವೇಶನ ನಡೆಸಲಾಗುವುದು. ನಾನು ರೈತರ ಪರ ಇದ್ದೇನೆ. ದೇಶ ಹಾಗೂ ರೈತರ ಹಿತದೃಷ್ಟಿಯಿಂದ ಈ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಬ್ಯಾನರ್ಜಿ ಹೇಳಿದ್ದಾರೆ.

ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ಕೇರಳ ಸೇರಿದಂತೆ ಈಗಾಗಲೇ ಐದು ರಾಜ್ಯಗಳು ನಿರ್ಣಯ ಕೈಗೊಂಡಿವೆ. ಈ ಕುರಿತು ಅಧಿವೇಶನ ಕರೆಯುವಂತೆ ಕಾಂಗ್ರೆಸ್ ಹಾಗೂ ಎಡಪಕ್ಷಗಳು ಮಮತಾ ಸರಕಾರವನ್ನು ಒತ್ತಾಯಿಸಿದ್ದವು.

Join Whatsapp