ನಿರೀಕ್ಷಣಾ ಜಾಮೀನು ಅರ್ಜಿ ವಜಾ: ಭವಾನಿ ರೇವಣ್ಣ ಬಂಧನ ಸಾಧ್ಯತೆ

Prasthutha|

ಬೆಂಗಳೂರು: ಪ್ರಜ್ವಲ್ ರೇವಣ್ಣ ಆರು ದಿನ ಎಸ್​​ಐಟಿ ವಶಕ್ಕೆ ಒಳಗಾದ ಬೆನ್ನಲ್ಲೇ ಅವರ ತಾಯಿ ಭವಾನಿ ಅವರಿಗೆ ಆಘಾತ ಎದುರಾಗಿದೆ. ಮಗನ ಲೈಂಗಿಕ ದೌರ್ಜನ್ಯ ಸಂಬಂಧವಾಗಿ ಕೆ.ಆರ್.ನಗರ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಭವಾನಿ ರೇವಣ್ಣ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.

- Advertisement -

ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಪೊಲೀಸರು ಭವಾನಿ ಅವರಿಗೆ ತನಿಖೆಗೆ ಹಾಜರಾಗುವಂತೆ 15 ದಿನಗಳ ಹಿಂದೆ ನೋಟಿಸ್​ ನೀಡಿದ್ದರು. ಅದಕ್ಕೆ ಪ್ರತಿಕ್ರಿಯಿಸದ ಅವರು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಏತನ್ಮಧ್ಯೆ ಶುಕ್ರವಾರ ಬೆಳಗ್ಗೆ ಎಸ್​ಐಟಿ ಅಧಿಕಾರಿಗಳೂ ಭವಾನಿ ಅವರಿಗೆ ಎರಡನೇ ನೋಟಿಸ್​ ನೀಡಿದ್ದರು. ಅವರು ಮನೆಯಲ್ಲಿ ಇಲ್ಲದ ಕಾರಣ ನೋಟಿಸ್ ಅಂಟಿಸಿ ಬಂದಿದ್ದರು. ಇದೀಗ ಕೋರ್ಟ್​​ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ನಿರೀಕ್ಷಣಾ ಜಾಮೀನು ವಜಾಗೊಂಡಿರುವ ಕಾರಣ ಭವಾನಿ ರೇವಣ್ಣರನ್ನು ಎಸ್​ಐಟಿ ಅಧಿಕಾರಿಗಳು ಅವರನ್ನು ಬಂಧಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.



Join Whatsapp