ಮುಖ್ಯಮಂತ್ರಿ ಬೊಮ್ಮಾಯಿ ವಿರುದ್ಧ ಮತ್ತೆ ಹರಿಹಾಯ್ದ ಅನ್ವರ್ ಮಾಣಿಪ್ಪಾಡಿ

Prasthutha|

ಮಂಗಳೂರು: ಬಿಜೆಪಿ ಹಿರಿಯ ಮುಖಂಡ ಹಾಗೂ ಪಕ್ಷದ ರಾಜ್ಯ ವಕ್ತಾರ ಅನ್ವರ್ ಮಾಣಿಪ್ಪಾಡಿ ಮತ್ತೊಮ್ಮೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಹರಿಹಾಯ್ದಿದಿದ್ದಾರೆ.

- Advertisement -

ವಕ್ಫ್ ಮಂಡಳಿಯಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ಸರ್ಕಾರ ಇದುವರೆಗೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮಾಣಿಪ್ಪಾಡಿಯವರು, ನ್ಯಾಯ ಪಾಲಿಸುವಂತೆ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅನ್ವರ್ ಮಾಣಿಪ್ಪಾಡಿ, ಬೊಮ್ಮಾಯಿ ಅವರ ಗಮನಕ್ಕೆ: ವಕ್ಫ್ ನಲ್ಲಿ ನಡೆದ ಭ್ರಷ್ಟಾಚಾರ ಮತ್ತು ಲೂಟಿಗೆ ಸಂಬಂಧಿಸಿದಂತೆ ನಾನು ನಿಮಗೆ ಹಲವು ಪತ್ರಗಳನ್ನು ಬರೆದಿದ್ದೇನೆ. ಆದರೆ ನೀವು ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಅಥವಾ ಯಾವುದೇ ತನಿಖೆಗೂ ಆದೇಶಿಸಿಲ್ಲ. ಈ ಭ್ರಷ್ಟಾಚಾರದ ಬಗ್ಗೆ ಮಾಧ್ಯಮಗಳು ಮಾತನಾಡುತ್ತಿವೆ. ನೀವು ಅವರೊಂದಿಗೆ ಇದ್ದಂತೆ ಕಾಣುತ್ತದೆ. ಬೊಮ್ಮಾಯಿಜೀ, ನೀವು ಮೋದೀಜಿಯ ಬಿಜೆಪಿ ಭಾಗ ಅಲ್ಲವೇ? ನ್ಯಾಯ ಪಾಲಿಸಿ, ಅದಕ್ಕಾಗಿಯೇ ಜೀವಿಸಿ! ಎಂದು ಒತ್ತಾಯಿಸಿದ್ದಾರೆ.

Join Whatsapp