Home ಕರಾವಳಿ ಮುಖ್ಯಮಂತ್ರಿ ಬೊಮ್ಮಾಯಿ ವಿರುದ್ಧ ಮತ್ತೆ ಹರಿಹಾಯ್ದ ಅನ್ವರ್ ಮಾಣಿಪ್ಪಾಡಿ

ಮುಖ್ಯಮಂತ್ರಿ ಬೊಮ್ಮಾಯಿ ವಿರುದ್ಧ ಮತ್ತೆ ಹರಿಹಾಯ್ದ ಅನ್ವರ್ ಮಾಣಿಪ್ಪಾಡಿ

ಮಂಗಳೂರು: ಬಿಜೆಪಿ ಹಿರಿಯ ಮುಖಂಡ ಹಾಗೂ ಪಕ್ಷದ ರಾಜ್ಯ ವಕ್ತಾರ ಅನ್ವರ್ ಮಾಣಿಪ್ಪಾಡಿ ಮತ್ತೊಮ್ಮೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಹರಿಹಾಯ್ದಿದಿದ್ದಾರೆ.

ವಕ್ಫ್ ಮಂಡಳಿಯಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ಸರ್ಕಾರ ಇದುವರೆಗೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮಾಣಿಪ್ಪಾಡಿಯವರು, ನ್ಯಾಯ ಪಾಲಿಸುವಂತೆ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅನ್ವರ್ ಮಾಣಿಪ್ಪಾಡಿ, ಬೊಮ್ಮಾಯಿ ಅವರ ಗಮನಕ್ಕೆ: ವಕ್ಫ್ ನಲ್ಲಿ ನಡೆದ ಭ್ರಷ್ಟಾಚಾರ ಮತ್ತು ಲೂಟಿಗೆ ಸಂಬಂಧಿಸಿದಂತೆ ನಾನು ನಿಮಗೆ ಹಲವು ಪತ್ರಗಳನ್ನು ಬರೆದಿದ್ದೇನೆ. ಆದರೆ ನೀವು ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಅಥವಾ ಯಾವುದೇ ತನಿಖೆಗೂ ಆದೇಶಿಸಿಲ್ಲ. ಈ ಭ್ರಷ್ಟಾಚಾರದ ಬಗ್ಗೆ ಮಾಧ್ಯಮಗಳು ಮಾತನಾಡುತ್ತಿವೆ. ನೀವು ಅವರೊಂದಿಗೆ ಇದ್ದಂತೆ ಕಾಣುತ್ತದೆ. ಬೊಮ್ಮಾಯಿಜೀ, ನೀವು ಮೋದೀಜಿಯ ಬಿಜೆಪಿ ಭಾಗ ಅಲ್ಲವೇ? ನ್ಯಾಯ ಪಾಲಿಸಿ, ಅದಕ್ಕಾಗಿಯೇ ಜೀವಿಸಿ! ಎಂದು ಒತ್ತಾಯಿಸಿದ್ದಾರೆ.

Join Whatsapp
Exit mobile version