Home ಟಾಪ್ ಸುದ್ದಿಗಳು ಆಂಧ್ರಪ್ರದೇಶದ ಐಟಿ ಸಚಿವ ಮೇಕಪತಿ ಗೌತಮ್​ ರೆಡ್ಡಿ ಹೃದಯಾಘಾತದಿಂದ ನಿಧನ

ಆಂಧ್ರಪ್ರದೇಶದ ಐಟಿ ಸಚಿವ ಮೇಕಪತಿ ಗೌತಮ್​ ರೆಡ್ಡಿ ಹೃದಯಾಘಾತದಿಂದ ನಿಧನ

ಹೈದರಾಬಾದ್​: ಆಂಧ್ರಪ್ರದೇಶದ ಐಟಿ ಇಲಾಖೆ ಸಚಿವ ಮೇಕಪತಿ ಗೌತಮ್​ ರೆಡ್ಡಿ ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ.

49ವರ್ಷದ ಗೌತಮ್​ ರೆಡ್ಡಿ ಅವರಿಗೆ ಇಂದು ಬೆಳಗ್ಗೆ ಹಠಾತ್​ ಹೃದಯಾಘಾತ ಕಾಣಿಸಿಕೊಂಡಿದ್ದು, ಅವರನ್ನು ಜೂಬ್ಲಿ ಹಿಲ್ಸ್​ನ ಅಪೋಲೋ ಆಸ್ಪತ್ರೆಗೆ ಸಾಗಿಸುವಾಗ ದಾರಿಮಧ್ಯೆಯೇ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.

ಆಂಧ್ರಪ್ರದೇಶ ಸರ್ಕಾರದ ಐಟಿ ಖಾತೆ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಗೌತಮ್​ ರೆಡ್ಡಿ, ಒಂದು ವಾರದ ಹಿಂದಷ್ಟೇ ದುಬೈ ಎಕ್ಸ್​ಪೋದಲ್ಲಿ ಪಾಲ್ಗೊಂಡು ವಿವಿಧ ಕಂಪನಿಗಳ ಜೊತೆ ಆಂಧ್ರಪ್ರದೇಶದಲ್ಲಿ ಹೂಡಿಕೆ ಮಾಡುವ ಒಪ್ಪಂದದಲ್ಲಿ ಭಾಗವಹಿಸಿದ್ದರು.

ನಿನ್ನೆಯಷ್ಟೇ ಅವರು ದುಬೈಯಿಂದ ಹೈದರಾಬಾದ್​ಗೆ ಬಂದಿಳಿದಿದ್ದರು. ಮಾಜಿ ಸಂಸದ ಮೇಕಪತಿ ರಾಜಮೋಹನ್​ ರೆಡ್ಡಿ ಅವರ ಪುತ್ರರಾದ ಗೌತಮ್​ರೆಡ್ಡಿ ನೆಲ್ಲೂರು ಜಿಲ್ಲೆಯ ಆತ್ಮಾಕೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಅವರು 2014, 2019 ರಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

Join Whatsapp
Exit mobile version