ಸಚಿವ ಸ್ಥಾನ ಸಿಗದ್ದಕ್ಕೆ ಅಪ್ಪಚ್ಚು ರಂಜನ್ ತೀವ್ರ ಅಸಮಾಧಾನ: ಪ್ರತಾಪ್ ಸಿಂಹ ವಿರುದ್ಧ ತೀವ್ರ ವಾಗ್ದಾಳಿ

Prasthutha|

ಮಡಿಕೇರಿ: ಕೊಡಗು ಜಿಲ್ಲೆಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್ ಸಿಂಹ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್, ಸಂಸರದ್ದು ಜಾಣ ಮೌನ ಎಂದು ವ್ಯಂಗ್ಯವಾಡಿದ್ದಾರೆ. ಜಿಲ್ಲೆಗೆ ಜಿಲ್ಲಾವಾರು, ಸಾಮಾಜಿಕ ನ್ಯಾಯದ ಪ್ರಕಾರ ಸಚಿವ ಸ್ಥಾನ ಸಿಗಬೇಕಿತ್ತು. ಮಾತ್ರವಲ್ಲ ಹಿರಿತನದ ಆಧಾರದಲ್ಲೂ ಸಿಗಬೇಕಿತ್ತು. ಆದರೆ ಹಿರಿಯರನ್ನು ಕಡೆಗಣಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

- Advertisement -


ಒಂದೊಂದು ಜಿಲ್ಲೆಗೆ ಮೂರ್ನಾಲ್ಕು ಸಚಿವ ಸ್ಥಾನ ನೀಡಲಾಗಿದೆ. ಟೇಕಿಟ್ ಆಸ್ ಗ್ರಾಂಟೆಂಡ್ ಎಂಬಂತಾಗಿದೆ. ಇದು ಸರಿಯಾದ ಕ್ರಮವಲ್ಲ ಎಂದು ನೇರವಾಗಿಯೇ ಬೇಸರ ವ್ಯಕ್ತಪಡಿಸಿದರು. ಜಿಲ್ಲೆಗೆ ಅನ್ಯಾಯವಾಗಿದ್ದರೂ ಸಂಸದರು ಕೂಡ ಜಾಣ ಮೌನಕ್ಕೆ ಶರಣಾಗಿದ್ದಾರೆ. ಅವರು ಸರ್ಕಾರದ ಮೇಲೆ ಒತ್ತಡ ಹಾಕಬೇಕಿತ್ತು. ಅವರು ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿದ್ದು, ಅವರಿಗೆ ಜಿಲ್ಲೆಯಿಂದ 80 ಸಾವಿರಕ್ಕೂ ಅಧಿಕ ಮತಗಳು ಸಿಕ್ಕಿವೆ. ಅವರ ಮೌನ ಬೇಸರ ತರಿಸಿದೆ ಎಂದು ಅಪ್ಪಚ್ಚು ರಂಜನ್ ನೆಲ್ಯಹುದಿಕೇರಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದರು.

Join Whatsapp