Home ಟಾಪ್ ಸುದ್ದಿಗಳು ಮುಸ್ಲಿಮರು, ಕ್ರೈಸ್ತರ ಅಲ್ಪಸಂಖ್ಯಾತ ಸ್ಥಾನಮಾನ ಮರುನಿಗದಿ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ

ಮುಸ್ಲಿಮರು, ಕ್ರೈಸ್ತರ ಅಲ್ಪಸಂಖ್ಯಾತ ಸ್ಥಾನಮಾನ ಮರುನಿಗದಿ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ

ಕೋಝಿಕ್ಕೋಡು, ಜು.25: ಕೇರಳದಲ್ಲಿ ಮುಸ್ಲಿಮರು ಮತ್ತು ಕ್ರೈಸ್ತರ ಅಲ್ಪಸಂಖ್ಯಾತ ವರ್ಗದ ಸ್ಥಾನಮಾನ ಪರಾಮರ್ಶಿಸಿ ಮರುನಿಗದಿಪಡಿಸಲು ಮತ್ತು ಅಲ್ಪಸಂಖ್ಯಾತರ ಪಟ್ಟಿಯನ್ನು ಮರುನಿರ್ಧರಣ ಮಾಡಲು ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗಕ್ಕೆ ನಿರ್ದೇಶನಗಳನ್ನು ನೀಡುವಂತೆ ಕೋರಿ ಕೇರಳ ಹೈಕೋರ್ಟ್‌ಗೆ ಅರ್ಜಿಯೊಂದು ಸಲ್ಲಿಕೆಯಾಗಿದೆ.


ಸಿಟಿಜನ್ಸ್‌ಅಸೋಸಿಯೇಷನ್‌ ಫಾರ್‌ ಡೆಮಾಕ್ರಸಿ, ಈಕ್ವಾಲಿಟಿ, ಟ್ರಾಂಕ್ವಿಲಿಟಿ, ಅಂಡ್‌ಸೆಕ್ಯುಲರಿಸಂ (ಸಿಎಡಿಇಟಿಎಸ್‌ಕೆಡೆಟ್ಸ್‌) ಸಂಸ್ಥೆ ಸಲ್ಲಿಸಿರುವ ಈ ಅರ್ಜಿ ಸಂಬಂಧ ಮುಖ್ಯ ನ್ಯಾಯಮೂರ್ತಿ ಎಸ್.ಮಣಿಕುಮಾರ್ ಮತ್ತು ನ್ಯಾಯಮೂರ್ತಿ ಶಾಜಿ ಪಿ ಚಾಲಿ ಅವರ ವಿಭಾಗೀಯ ಪೀಠ ಆದೇಶ ಕಾಯ್ದಿರಿಸಿದೆ.


ಧರ್ಮ, ಜಾತಿ, ಲಿಂಗ ಇತ್ಯಾದಿಗಳ ಆಧಾರದ ಮೇಲೆ ತಾರತಮ್ಯದ ವಿರುದ್ಧ ಹೋರಾಡುವುದು ಮತ್ತು ಜಾತ್ಯತೀತತೆಯ ತತ್ವಗಳನ್ನು ಎತ್ತಿಹಿಡಿಯುವುದು ತಮ್ಮ ಉದ್ದೇಶವಾಗಿದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದು ಪ್ರಕರಣದಲ್ಲಿ ತಮಗೆ ಯಾವುದೇ ವೈಯಕ್ತಿಕ ಅಥವಾ ಖಾಸಗಿ ಹಿತಾಸಕ್ತಿ ಇಲ್ಲ ಎಂದಿದ್ದಾರೆ.


ಕೇರಳದ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಸಾಮಾಜಿಕವಾಗಿ ಅಥವಾ ಶೈಕ್ಷಣಿಕವಾಗಿ ಹಿಂದುಳಿದವರಲ್ಲದ ಕಾರಣ ಅವರ ಅಲ್ಪಸಂಖ್ಯಾತ ಸ್ಥಾನಮಾನವನ್ನು ಮರುನಿರ್ಣಯಿಸಬೇಕಿದೆ. ಅಲ್ಪಸಂಖ್ಯಾತರು ಅಸಮಾಧಾನಗೊಳ್ಳುವ ಭೀತಿಯಿಂದ ರಾಜ್ಯ ಸರ್ಕಾರ ಅವರ ಸ್ಥಾನಮಾನ ಮರುನಿಗದಿಪಡಿಸುವ ಧೈರ್ಯ ಮಾಡಿಲ್ಲ. ಆರ್ಥಿಕ, ಔದ್ಯೋಗಿಕ, ವೃತ್ತಿಪರ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಕ್ರೈಸ್ತ ಮತ್ತು ಮುಸ್ಲಿಮ್ ಸಮುದಾಯಗಳಿಗೆ ಆದ್ಯತೆ ನೀಡುವುದು ಸಾಂವಿಧಾನಿಕ ಪ್ರಜಾಪ್ರಭುತ್ವದ ಜಾತ್ಯತೀತ ರಚನೆಗೆ ಗಂಭೀರ ಹೊಡೆತವಾಗಿದ್ದು ಬಹುರಾಷ್ಟ್ರೀಯವಾದಕ್ಕೆ ಕಾರಣವಾಗಬಹುದು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.


ಮುಖ್ಯವಾಗಿ ಸಂವಿಧಾನದ 15 (4)ನೇ ವಿಧಿಯನ್ವಯ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳಿಗೆ ಮಾತ್ರ ವಿಶೇಷ ನಿಬಂಧನೆಗಳು ಅನ್ವಯಿಸುತ್ತವೆ. ಪ್ರಸಕ್ತ ಸಾಲಿನ ಒಟ್ಟಾರೆ ಸಂಖ್ಯೆಗಳನ್ನು ಪರಿಗಣಿಸಿದರೂ ಕೂಡ 2011ರ ಜನಗಣತಿಯ ಪ್ರಕಾರ ಎರಡು ಸಮುದಾಯಗಳು ಸೇರಿ ಇಂದಿಗೂ ಶೇ 50ರಷ್ಟು ಜನಸಂಖ್ಯೆ ಹೊಂದಿವೆ.

ಅದರಲ್ಲಿಯೂ ಕೇರಳದಲ್ಲಿ ಮುಸ್ಲಿಮರು ಮತ್ತು ಕ್ರೈಸ್ತರು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರಲ್ಲ. ಇತ್ತೀಚಿನ ವರ್ಷಗಳಲ್ಲಿ ಅವರು ಶಿಕ್ಞಣ, ಸಾಮಾಜಿಕ ಆರ್ಥಿಕ ಕ್ಷೇತ್ರಗಳಲ್ಲಿ ಹಿಂದೂಗಳಿಗಿಂತಲೂ ಹೆಚ್ಚು ಪ್ರಗತಿ ಸಾಧಿಸಿದ್ದು ಅವರ ಸ್ಥಿತಿಯನ್ನು ಮರು ನಿರ್ಧರಿಸಬೇಕು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. 

ಧಾರ್ಮಿಕ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಸ್ಥಾನಮಾನವನ್ನು ನಿರ್ಧರಿಸಬೇಕಾಗಿರುವುದು ಸರ್ಕಾರ ಎಂದು ಟಿ ಎಂ ಎ ಪೈ ಮತ್ತು ಕರ್ನಾಟಕ ಸರ್ಕಾರ ನಡುವಣ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ನೀಡಿರುವ ತೀರ್ಪನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ಬಾಲ್‌ಪಾಟೀಲ್‌ಮತ್ತಿತರರು ಹಾಗೂ ಕೇಂದ್ರ ಸರ್ಕಾರ ಇನ್ನಿತರರ ನಡುವಣ ಪ್ರಕರಣದ ತೀರ್ಪು, ಪಳೋಳಿ ಮುಹಮ್ಮದ್‌ಸಮಿತಿಯ ಶಿಫಾರಸುಗಳನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅರ್ಜಿದಾರರ ಪರವಾಗಿ ವಕೀಲ ಸಿ ರಾಜೇಂದ್ರನ್ ವಾದ ಮಂಡಿಸಿದರು.
(ಕೃಪೆ: ಬಾರ್ ಆಂಡ್ ಬೆಂಚ್)

Join Whatsapp
Exit mobile version