ದತ್ತ ಜಯಂತಿಯಂದು ಅರ್ಚಕರ ನೇಮಕಾತಿ| ಜಿಲ್ಲಾಧಿಕಾರಿಗಳ ನಡೆ ಖಂಡನೀಯ: ಅಫ್ಸರ್ ಕೊಡ್ಲಿಪೇಟೆ

Prasthutha|

ಚಿಕ್ಕಮಗಳೂರು: ದತ್ತ ಜಯಂತಿಯಂದು ಅರ್ಚಕರ ನೇಮಕಾತಿ ಮಾಡಲು ಅನುಮತಿ ನೀಡಿರುವ ಜಿಲ್ಲಾಧಿಕಾರಿಯವರ ನಡೆಯನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ತೀವ್ರವಾಗಿ ಖಂಡಿಸಿದ್ದಾರೆ.

- Advertisement -

ಈ ಕುರಿತು ಟ್ವಿಟ್ ಮಾಡಿರುವ ಅವರು, “ಚಿಕ್ಕಮಗಳೂರಿನ ಬಾಬಾಬುಡನ್ ದರ್ಗಾ ವಿಚಾರದಲ್ಲಿ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅಪೀಲು ಸಂ: 1110/2021 ರ ಅನ್ವಯ ಪ್ರಕರಣ ಇತ್ಯರ್ಥಕ್ಕೆ ಬಾಕಿ ಇರುವಾಗ ದತ್ತ ಜಯಂತಿಯಂದು ತಾತ್ಕಾಲಿಕವಾಗಿ ಅರ್ಚಕರನ್ನು ನೇಮಕಾತಿ ಮಾಡಲು ಅನುಮತಿ ಕೊಟ್ಟಿರುವ ಜಿಲ್ಲಾಧಿಕಾರಿಗಳ ನಡೆ ಖಂಡನೀಯ. ಇದು ಇತಿಹಾಸವನ್ನು ಅಳಿಸಿ ಹಾಕುವ ಕೋಮುವಾದಿ ಹುನ್ನಾರವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Join Whatsapp