ಕುಮಾರಸ್ವಾಮಿ ದಾಖಲೆ ನೀಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು: ಪ್ರಲ್ಹಾದ್ ಜೋಶಿ

Prasthutha|

ಧಾರವಾಡ: ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ನೈಸ್ ರಸ್ತೆ ಹಗರಣದ ಬಗ್ಗೆ ದಾಖಲೆ ನೀಡಿದರೆ ಅದನ್ನು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

- Advertisement -

ಜಿಲ್ಲೆಯ ಅಳ್ನಾವರದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ದಾಖಲೆ ನೀಡಲಿ ಎಂದರು.

ಧಾರವಾಡ-ಬೆಳಗಾವಿ ರೈಲು ಮಾರ್ಗ ವಿಳಂಬ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವ, ಭೂಸ್ವಾಧೀನ ಪ್ರಕ್ರಿಯೆ ಆಗಬೇಕು. ಅರ್ಧಕ್ಕಿಂತ ಹೆಚ್ಚು ಭೂಮಿ ಕೊಡಬೇಕು. ಆಗ ಕಾಮಗಾರಿ ಆರಂಭಿಸಬಹುದು. ರಾಜ್ಯ ಸರ್ಕಾರ ಭೂಸ್ವಾಧೀನ ಮಾಡಿಕೊಡಬೇಕು. ಆದರೆ ರಸ್ತೆ ಮಾಡುವುದಕ್ಕೇ ಹಣ ಇಲ್ಲ ಅಂತಾ ಹೇಳುತ್ತಿದ್ದಾರೆ. ಗ್ಯಾರಂಟಿ ಕೊಡುವುದೇ ಸಾಕಾಗಿದೆ ಎಂದು ಸಚಿವರು ಹೇಳುತ್ತಿದ್ದಾರೆ. ರಸ್ತೆ, ಮೂಲಭೂತ ಸೌಲಭ್ಯಕ್ಕೆ ಇವರೇನು ಹಣ ಕೊಡುವ ಖಚಿತತೆ ಇಲ್ಲ. ವರ್ಗಾವಣೆ ದಂಧೆಗೆ ಇಳಿದಿದ್ದಾರೆ ಎಂದು ಆರೋಪಿಸಿದರು.

Join Whatsapp