ಸಂವಿಧಾನ ವಿರೋಧಿ ಹೇಳಿಕೆ: ಪ್ರೀತಮ್ ಗೌಡರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಅಪ್ಸರ್ ಕೊಡ್ಲಿಪೇಟೆ ಆಗ್ರಹ

Prasthutha|

ಬೆಂಗಳೂರು: ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿ ಶಾಸಕನಾಗಿ ಮುಂದಿನ ಚುನಾವಣೆಯಲ್ಲಿ “ನನಗೆ ಓಟ್ ಹಾಕದಿದ್ದರೆ ಯಾವ ಕೆಲಸನೂ ಮಾಡಿ ಕೊಡಲ್ಲ” ಎಂಬ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಪ್ರೀತಮ್ ಗೌಡರವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಎಸ್’ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಟ್ವೀಟ್ ಮಾಡಿರುವ ಅವರು, ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಪ್ರೀತಮ್ ಗೌಡ ರವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಲು ರಾಜ್ಯಪಾಲರಲ್ಲಿ ಆಗ್ರಹಿಸುತ್ತೇನೆ. ಒಬ್ಬ ಶಾಸಕನಾಗಿ ಸಾರ್ವಜನಿಕವಾಗಿ ಹೇಗೆ ನಡೆದುಕೊಳ್ಳಬೇಕು ಎಂಬ ಕನಿಷ್ಠ ಪರಿಜ್ಞಾನ ಇಲ್ಲದ ಇಂತಹ ನಾಲಾಯಕ್ ಜನಪ್ರತಿನಿಧಿಗೆ ಮುಂದಿನ ಚುನಾವಣೆಯಲ್ಲಿ ಹಾಸನದ ಜನತೆ ತಕ್ಕ ಪಾಠ ಕಲಿಸಬೇಕು. ಆರೂವರೆ ಕೋಟಿ ಕರ್ನಾಟಕದ ಜನರು ಕಷ್ಟಪಟ್ಟು ಬೆವರು ಸುರಿಸಿ ಕಟ್ಟುವ ತೆರಿಗೆ ಹಣದಿಂದ ಪ್ರತಿ ತಿಂಗಳು ಲಕ್ಷಾಂತರ ಸಂಬಳ ಪಡೆಯುವ ನಿಮಗೆ ಶಾಸಕರಾಗುವ ಯೋಗ್ಯತೆ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

Join Whatsapp