ಪಿಎಸ್ ಐ ಪ್ರಕರಣದಲ್ಲಿ ಆರಗ ಕೂಡಾ ಜೈಲು ಪಾಲಾಗ್ತಾರೆ: ಬಿ.ಕೆ.ಹರಿಪ್ರಸಾದ್

Prasthutha|

ಬೆಂಗಳೂರು: ಪಿಎಸ್ ಐ ಪರೀಕ್ಷೆ ಹಗರಣದಲ್ಲಿ ರಾಜ್ಯದಲ್ಲಿ ಈಗಾಗಲೇ 46 ಮಂದಿ ಅಧಿಕಾರಿಗಳು ಬಂಧನವಾಗಿದ್ದು, ರಾಜ್ಯ ಗೃಹಮಂತ್ರಿ ಆರಗ ಜ್ಞಾನೇಂದ್ರ ಅವರು ಸಹ ಜೈಲು ಪಾಲಾಗ್ತಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.

- Advertisement -

ಈ ಹಿಂದೆ ಪೊಲೀಸ್ ನೇಮಕಾತಿಯಲ್ಲಿ ಹಗರಣವೇ ನಡೆದಿದಲ್ಲ ಎಂದು ಗೃಹಸಚಿವರು ಹೇಳಿದ್ದರು. ಕೊನೆಗೆ ತನ್ನ ತಲೆ ಉಳಿಸಿಕೊಳ್ಳಲು ಐಪಿಎಸ್ ಅಧಿಕಾರಿಯನ್ನು ಬಲಿಕೊಟ್ಟರು. ಪಿಎಸ್ ಐ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಅಧಿಕಾರಿಗಳು ಜೈಲಿನಲ್ಲಿದ್ದಾರೆ. ಆರಗ ಜ್ಞಾನೇಂದ್ರ ಸಹ ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿ ಜೈಲು ಸೇರುವ ತಯಾರಿ ನಡೆಸಿದ್ದಾರೆ ಎಂದು ಹರಿಪ್ರಸಾದ್ ಲೇವಡಿ ಮಾಡಿದರು.



Join Whatsapp