Home ಕರಾವಳಿ ಅರವಿಂದ ಬೋಳಾರ್ ನಟನೆಗೆ ಜಿಲ್ಲಾಧಿಕಾರಿ ಫುಲ್ ಖುಷ್ !

ಅರವಿಂದ ಬೋಳಾರ್ ನಟನೆಗೆ ಜಿಲ್ಲಾಧಿಕಾರಿ ಫುಲ್ ಖುಷ್ !

ಮಂಗಳೂರು: ಖ್ಯಾತ ತುಳು ಚಲನಚಿತ್ರ ನಟ ಹಾಗೂ ನಾಟಕ ಕಲಾವಿದ ಅರವಿಂದ್ ಬೋಳಾರ್ ಅವರ ನಟನಾ ಕೌಶಲ್ಯಕ್ಕೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

   ಜು.25ರ ಸೋಮವಾರ ಜಿಲ್ಲಾಧಿಕಾರಿಯವರ ಕಚೇರಿಗೆ ಬಂದ ಕಲಾವಿದ ಅರವಿಂದ ಬೋಳಾರ್ ಅವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಯವರು, ಬೋಳಾರ್ ಅವರ ನಟನಾ ಶೈಲಿ, ಡೈಲಾಗ್ ಡೆಲಿವರಿ ಹಾಗೂ ಅವರ ವೃತ್ತಿಯನ್ನು ಪ್ರಶಂಶಿಸಿದರು.

ಬೋಳಾರ್ ಅವರೊಂದಿಗೆ ಜಿಲ್ಲಾಧಿಕಾರಿ ಫೋಟೋ ತೆಗೆಸಿಕೊಂಡು ನಟನ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಇದ್ದರು.

Join Whatsapp
Exit mobile version