ಅರ್ಜುನನ ಅಂತ್ಯಸಂಸ್ಕಾರ: ನನ್ನ ಆನೆಯನ್ನು ಬದುಕಿಸಿಕೊಡಿ ಕಣ್ಣೀರಿಟ್ಟು ಗೋಳಾಡಿದ ಮಾವುತ

Prasthutha|

ಮೈಸೂರು: ಕಾಡಾನೆ ಕಾರ್ಯಾಚರಣೆ ವೇಳೆ ಕಾದಾಟದಲ್ಲಿ ಮೃತಪಟ್ಟ ಅರ್ಜುನ ಆನೆಯನ್ನು ನೆನೆದು ಮಾವುತ ವಿನು ಕಣ್ಣೀರಿಟ್ಟಿದ್ದಾರೆ.

- Advertisement -

ಅಂತಿಮ ದರ್ಶನದ ವೇಳೆ ಮಾವುತ ವಿನು ಅರ್ಜುನ ಆನೆಯನ್ನ ನೆನೆದು ಬಿಕ್ಕಿ ಬಿಕ್ಕಿ ಅತ್ತಿದ್ದು, ನನ್ನ ಆನೆಯನ್ನ ಬದುಕಿಸಿಕೊಡಿ. ನನ್ನನ್ನೂ ಅರ್ಜುನನ ಜೊತೆ ಮಣ್ಣು ಮಾಡಿ. ನನ್ನ ಆನೆಯನ್ನ ಮೈಸೂರಿಗೆ ಕಳುಹಿಸಿಕೊಡಿ ಅರ್ಜುನ ಸತ್ತಿಲ್ಲ ಎಂದು ಹೆಂಡತಿ ಮಕ್ಕಳಿಗೆ ಹೇಳಿದ್ದೇನೆ ಎಂದು ಕಣ್ಣೀರಿಟ್ಟರು. ಸೋಮವಾರ ಕಾಡಾನೆ ಜೊತೆಗಿನ ಕಾಳಗದಲ್ಲಿ ಮೃತಪಟ್ಟ ಆನೆಯ ಅಂತ್ಯಸಂಸ್ಕಾರಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಜನರು ತಂಡೋಪತಂಡವಾಗಿ ಬಂದು ದರ್ಶನ ಪಡೆಯುತ್ತಿದ್ದಾರೆ.

ಉಕ್ಕಿ ಬರುತ್ತಿದ್ದ ದುಃಖವನ್ನು ತಡೆದುಕೊಳ್ಳಲು ಪ್ರಯತ್ನಿಸಿದರೂ ವಿನುವಿಗೆ ಅಳು ತಡೆಯಲು ಆಗುತ್ತಿಲ್ಲ. ಪದೇ ಪದೇ ಅರ್ಜುನ ಬಳಿ ಹೋಗಿ, ನನ್ನೊಂದಿಗೆ ಬಂದು ಬಿಡು ಎಂದು ಕೇಳಿಕೊಳ್ಳುತ್ತಿರುವುದು ಮನಕಲುಕುವಂತಿತ್ತು.

- Advertisement -

ಅರಣ್ಯಾಧಿಕಾರಿಗಳ ನಿರ್ಲಕ್ಷ್ಯದಿಂದಲೇ ನಮ್ಮ ಸಾಂಸ್ಕೃತಿಕ ರಾಯಭಾರಿಯಾಗಿದ್ದ ಅರ್ಜುನ ಮೃತಪಟ್ಟಿದ್ದಾನೆ. ಅರಣ್ಯ ಅಧಿಕಾರಿಗಳ ಮೇಲೆ ಕೂಡಲೇ ಕ್ರಮ ಕೈಗೊಳ್ಳಬೇಕು. ವಿಧಾನಸಭೆ ಅಧಿವೇಶನದಲ್ಲಿ ಈ ಬಗ್ಗೆ ತುರ್ತು ಚರ್ಚೆ ಮಾಡಬೇಕು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

Join Whatsapp