Home ಟಾಪ್ ಸುದ್ದಿಗಳು ಶಿರೂರು ದುರಂತ: ಲಾರಿ ಮಾಲೀಕನ ವಿರುದ್ಧ ದೂರು ನೀಡಿದ ಮೃತ ಅರ್ಜುನ್ ಕುಟುಂಬ

ಶಿರೂರು ದುರಂತ: ಲಾರಿ ಮಾಲೀಕನ ವಿರುದ್ಧ ದೂರು ನೀಡಿದ ಮೃತ ಅರ್ಜುನ್ ಕುಟುಂಬ

ಕೋಯಿಕ್ಕೋಡ್: ಶಿರೂರಿ ದುರಂತದಲ್ಲಿ ಲಾರಿ ಸಮೇತ ಗಂಗಾವಳಿ ನದಿಯಲ್ಲಿ ಮುಳುಗಿ ಸಾವಿಗೀಡಾಗಿದ್ದ ಕೇರಳದ ಕಣ್ಣೂರಿನ ಚಾಲಕ ಅರ್ಜುನ್ ಅವರ ಸಹೋದರಿ ಅಂಜು, ಲಾರಿ ಮಾಲೀಕ ಮನಾಫ್ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದಾರೆ.


ಮನಾಫ್ ಅವರು ತಮ್ಮ ಕುಟುಂಬದ ಭಾವನಾತ್ಮಕ ಪರಿಸ್ಥಿತಿಯನ್ನು ಬಂಡವಾಳವನ್ನಾಗಿಸಿಕೊಂಡು, ಮೃತ ಸಹೋದರನ ಫೋಟೊ ಬಳಸಿ ಪ್ರಚಾರ ಪಡೆಯುತ್ತಿದ್ದಾರೆ. ಯೂಟ್ಯೂಬ್ ಚಾನೆಲ್ ಪ್ರಾರಂಭಿಸಿ ಕುಟುಂಬದ ಹೆಸರಿಗೆ ಕಳಂಕ ತರುತ್ತಿದ್ದಾರೆ ಎಂದು ಅಂಜು ದೂರಿನಲ್ಲಿ ಹೇಳಿದ್ದಾರೆ.


ಸಾಮಾಜಿಕ ಜಾಲತಾಣದಲ್ಲಿ ಕುಟುಂಬದ ಬಗ್ಗೆ ಮಾನಹಾನಿ ಪ್ರಚಾರ ಮಡುತ್ತಿರುವವರ ವಿರುದ್ದವೂ ದೂರು ನೀಡಿದ್ದಾರೆ.
ಚೆರುವಾಯೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಕುಟುಂಬದ ಪರಿಸ್ಥಿತಿಯನ್ನು ಮನಾಫ್ ವೈಯಕ್ತಿಕ ಲಾಭಕ್ಕಾಗಿ ಬಳಸುತ್ತಿದ್ದಾರೆ, ಹಣವನ್ನೂ ಸಂಗ್ರಹಿಸುತ್ತಿದ್ದಾರೆ ಎಂದು ಆರೋಪಿಸಿ ಕುಟುಂಬಸ್ಥರು ತಮ್ಮ ಮನೆಯಲ್ಲಿ ಬುಧವಾರ ಮಾಧ್ಯಮಗೋಷ್ಠಿ ನಡೆಸಿದ್ದರು.

ಮನಾಫ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 192 (ಗಲಭೆಗೆ ಕುಮ್ಮಕ್ಕು) ಹಾಗೂ ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ 120 (O) (ಸಾರ್ವಜನಿಕ ಶಾಂತಿ ಭಂಗ ಮತ್ತು ಅಶಾಂತಿ ಉಂಟುಮಾಡುವುದು) ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Join Whatsapp
Exit mobile version