ಸೇನಾ ಹೆಲಿಕಾಪ್ಟರ್ ದುರಂತ: 11 ಅಧಿಕಾರಿಗಳ ಮೃತದೇಹ ಗುರುತು ಪತ್ತೆ

Prasthutha|

ನವದೆಹಲಿ: ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ನಾಲ್ವರು ಭಾರತೀಯ ವಾಯುಪಡೆಯ ಸಿಬ್ಬಂದಿ ಗುರುತು ಪತ್ತೆ ಕಾರ್ಯ ಪೂರ್ಣವಾಗಿದೆ. ಇನ್ನು ಇಬ್ಬರ ಗುರುತು ಪತ್ತೆ ಕಾರ್ಯ ಆಗಬೇಕಿದ್ದು ಮೃತದೇಹಗಳ ಡಿಎನ್ ಎ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಮೂಲಕ ಇದುವರೆಗೆ 11 ಮಂದಿಯ ಮೃತದೇಹಗಳ ಗುರುತು ಪತ್ತೆ ಹಚ್ಚಲಾಗಿದೆ.

- Advertisement -

ಗುರುತು ಪತ್ತೆ ಹಚ್ಚಿದ ಮೃತಪಟ್ಟ ವಾಯುಪಡೆ ಅಧಿಕಾರಿಗಳನ್ನು ಜೆಡಬ್ಲ್ಯುಒ ಪ್ರದೀಪ್ ಎ, ವಿಂಗ್ ಕಮಾಂಡರ್ ಪಿ ಎಸ್ ಚೌಹಾನ್, ಜೆಡಬ್ಲ್ಯುಒ ರಾಣಾ ಪ್ರತಾಪ್ ದಾಸ್ ಮತ್ತು ಸ್ಕ್ರ್ವಾಡ್ರ್ ಲೀಡರ್ ಕುಲದೀಪ್ ಸಿಂಗ್ ಎಂದು ಗುರುತಿಸಲಾಗಿದೆ.

ತಮಿಳುನಾಡಿನ ಕೂನೂರು ಸಮೀಪ ಮೊನ್ನೆ ಬುಧವಾರ ಸೇನಾ ಹೆಲಿಕಾಪ್ಟರ್‌ ಪತನಗೊಂಡ ಪ್ರಕರಣದ ತನಿಖೆಯನ್ನು ಮೂರೂ ಸೇನೆಗಳ ಸದಸ್ಯರು ಇರುವ ಸಮಿತಿ ನಡೆಸಲಿದೆ.

- Advertisement -

Join Whatsapp