ಸಿಯಾಚಿನ್​ನಲ್ಲಿ ಅಗ್ನಿ ಅವಘಡ: ಸೇನಾಧಿಕಾರಿ ಹುತಾತ್ಮ, ಮೂವರಿಗೆ ಗಾಯ

Prasthutha|

ಹೊಸದಿಲ್ಲಿ: ಸಿಯಾಚಿನ್ ಹಿಮಪರ್ವತ ಪ್ರದೇಶದಲ್ಲಿ ಸೇನೆಯ ಮದ್ದುಗುಂಡುಗಳ ಬಂಕರ್‌ನಲ್ಲಿ ಬುಧವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಸೇನಾಧಿಕಾರಿಯೊಬ್ಬರು ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ.

- Advertisement -

ಘಟನೆ ಮುಂಜಾನೆ 3.30 ರ ಸುಮಾರಿಗೆ ಸಂಭವಿಸಿತ್ತು ಎನ್ನಲಾಗಿದೆ. ಗಾಯಗೊಂಡ ಅಧಿಕಾರಿಗಳನ್ನು ಹೆಲಿಕಾಫ್ಟರ್ ಮೂಲಕ ಚಂಡೀಗಢದ ಆಸ್ಪತ್ರೆಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು ಎಂದು ಭಾರತೀಯ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಹುತಾತ್ಮ ಸೇನಾ ಅಧಿಕಾರಿಯನ್ನು ಕ್ಯಾಪ್ಟನ್ ಅಂಶುಮಾನ್ ಸಿಂಗ್ ಎಂದು ಗುರುತಿಸಲಾಗಿದೆ. ಅವರು ರೆಜಿಮೆಂಟಲ್ ಮೆಡಿಕಲ್ ಆಫೀಸರ್ ಆಗಿದ್ದರು. ಇತರ ಮೂವರಿಗೆ ಹೊಗೆಯಿಂದಾಗಿ ಉಸಿರಾಟ ಸಮಸ್ಯೆ ಮತ್ತು ಸುಟ್ಟ ಗಾಯಗಳಾಗಿವೆ. ಅವರ ಸ್ಥಿತಿ ಈಗ ಸ್ಥಿರವಾಗಿದೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಮದ್ದುಗುಂಡುಗಳ ಟೆಂಟ್‌ನಲ್ಲಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.

Join Whatsapp
Exit mobile version