ಅರ್ನಾಬ್ ಗೋಸ್ವಾಮಿ ವಾಟ್ಸಪ್ ಚಾಟ್ ಪ್ರಕರಣ | ಜಂಟಿ ಸಂಸದೀಯ ಸಮಿತಿ ತನಿಖೆಗೆ ಕಾಂಗ್ರೆಸ್ ಆಗ್ರಹ

Prasthutha|

ನವದೆಹಲಿ : ಇತ್ತೀಚೆಗೆ ಸೋರಿಕೆಯಾಗಿರುವ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರದ್ದೆನ್ನಲಾದ ವಾಟ್ಸಪ್ ಚಾಟ್ ಸಂದೇಶಗಳ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆ ನಡೆಯಬೇಕು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಒತ್ತಾಯಿಸಲಾಗಿದೆ.

- Advertisement -

ಇದು ದೇಶದ ರಾಷ್ಟ್ರೀಯ ಭದ್ರತೆ ಮತ್ತು ಅಧಿಕೃತ ಗೌಪ್ಯತೆಗಳ ಕಾಯ್ದೆಯ ಉಲ್ಲಂಘನೆ ಎಂದು ಸಮಿತಿ ಸಭೆಯಲ್ಲಿ ಅಭಿಪ್ರಾಯ ಪಡಲಾಗಿದೆ.

ಸೋರಿಕೆಯಾದ ವಾಟ್ಸಪ್ ಚಾಟ್ ನಲ್ಲಿರುವ ಸಂದೇಶಗಳ ಅಂಶಗಳು ದೇಶದ್ರೋಹಕ್ಕೆ ಸಮಾನವಾದುದು, ಈ ಬಗ್ಗೆ ತನಿಖೆಯಾಗಬೇಕು ಎಂದು ಈಗಾಗಲೇ ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದರು.    

Join Whatsapp