ದುಷ್ಕರ್ಮಿಗಳನ್ನು ಬಂಧಿಸದಿದ್ದರೆ ‘ಅರೆಸ್ಟ್ ಮೀ’ ಪ್ರತಿಭಟನೆ: ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ

Prasthutha|

ಪುತ್ತೂರು: ಮುಂದಿನ 2 ದಿನಗಳಲ್ಲಿ ದುಷ್ಕರ್ಮಿಗಳನ್ನು ಬಂಧಿಸದಿದ್ದರೆ ‘ಅರೆಸ್ಟ್ ಮೀ’ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶೈಲಜಾ ಅಮರನಾಥ್ ಹೇಳಿಕೆ ನೀಡಿದ್ದಾರೆ.
ಕ್ಲಬ್ ಹೌಸ್‌ನಲ್ಲಿ ದೇವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದೇನೆ ಎಂದು ಕೆಲವೊಂದು ವ್ಯಕ್ತಿಗಳು ಮಾಡಿರುವ ಆರೋಪವು ಸತ್ಯಕ್ಕೆ ದೂರವಾಗಿದ್ದು, ಕ್ಲಬ್ ಹೌಸ್ ಆಡಿಯೋವನ್ನು ತಿರುಚಿ ತನ್ನ ತೇಜೋವಧೆ ಮಾಡುವ ಪ್ರಯತ್ನ ನಡೆಸಲಾಗಿದೆ ಎಂದು ಹೇಳಿದ್ದಾರೆ.

- Advertisement -

ಮುಂದಿನ 2 ದಿನಗಳಲ್ಲಿ ಈ ಬಗ್ಗೆ ಪೊಲೀಸರು ತನಿಖೆ ನಡೆಸಿ ಆಡಿಯೋ ತಿರುಚಿದವರನ್ನು ಬಂಧಿಸದಿದ್ದಲ್ಲಿ ನಾನೇ ಪುತ್ತೂರು ನಗರ ಠಾಣೆಯಲ್ಲಿ ‘ಎರೆಸ್ಟ್ ಮೀ’ ಎಂಬ ಬೋರ್ಡ್ ಹಿಡಿದುಕೊಂಡು ಪ್ರತಿಭಟನೆ ನಡೆಸುತ್ತೇನೆ ಎಂದು ಶೈಲಜಾ ಅಮರನಾಥ್ ತಿಳಿಸಿದ್ದಾರೆ

Join Whatsapp