ಬೇಕರಿಗೆ ನುಗ್ಗಿ ಹಲ್ಲೆ ನಡೆಸಿದ್ದ ಆರೋಪಿಗಳ ಬಂಧನ

Prasthutha|

ಬೆಂಗಳೂರು: ಇಲ್ಲಿನ ಎಚ್.ಎ.ಎಲ್ ಸಮೀಪ ಕುಂದನಹಳ್ಳಿ ಗೇಟ್ ಬಳಿ ಬ್ರಹ್ಮಲಿಂಗೇಶ್ವರ ಬೇಕರಿ ನಡೆಸುತ್ತಿರುವ ಬೈಂದೂರು ಮದ್ದೋಡಿಯ ಯುವಕರಿಗೆ ಹಲ್ಲೆ ನಡೆಸಿ ಹಣ ಎಗರಿಸಿದ್ದ ಮೂವರು ಆರೋಪಿಗಳನ್ನು ಹೆಚ್.ಎ.ಎಲ್ ಠಾಣೆಯ ಪೊಲೀಸರು ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಆಗಿರುವ ಕಾರ್ತಿಕ್ (20), ಅಲ್ಯೂಮಿನಿಯಂ ಕೆಲಸಗಾರ ಸಲ್ಮಾನ್ (20), ಖಾಸಗಿ ಹೋಟೆಲ್ ಮ್ಯಾನೇಜರ್ ಕಾರ್ತಿಕ್ (23) ಬಂಧಿತ ಆರೋಪಿಗಳು.

ಈ ಬಗ್ಗೆ ಮಾಹಿತಿ ನೀಡಿದ ವೈಟ್ ಫಿಲ್ಡ್ ಡಿಸಿಪಿ ಗಿರೀಶ್ ಅವರು ಘಟನೆಯ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ಪೊಲೀಸರು ತಂಡ ರಚಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದರು.

- Advertisement -

ಬೇಕರಿಯಲ್ಲಿ ವ್ಯವಹಾರ ನಡೆಸಿ ಹಣ ಕೇಳಿದಾಗ ಖ್ಯಾತೆ ತೆಗೆದ ರೌಡಿಗಳು ಅಂಗಡಿಯೊಳಗೆ ನುಗ್ಗಿ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಬೇಕರಿಯೊಳಗೆ ನುಗ್ಗಿದ ಆರೋಪಿಗಳು ಇಬ್ಬರ ಮೇಲೆ ಹಲ್ಲೆ ನಡೆಸಿದ್ದು, ಪ್ರಶ್ನಿಸಲು ಬಂದವರಿಗೂ ಹಲ್ಲೆ ನಡೆಸಲಾಗಿದೆ. ಅಂಗಡಿಯ ಸಿಸಿ ಕ್ಯಾಮಾರಾದಲ್ಲಿ ಸೆರೆಯಾಗಿದ್ದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಘಟನೆ ಬೆಳಕಿಗೆ ಬರುತ್ತಿದ್ದಂತೆ ಕರಾವಳಿಯ ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಹೆಚ್.ಎ.ಎಲ್ ಪೊಲೀಸ್ ಠಾಣೆಗೆ ಕರಾವಳಿಯ ವಿವಿಧ ಸಂಘಟನೆಗಳು ಹಾಗೂ ವ್ಯಾಪಾರಸ್ಥರು ಮುತ್ತಿಗೆ ಹಾಕಿ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದ್ದರು.

Join Whatsapp