Home ಕರಾವಳಿ ವಾರಂಟ್ ಹೊರಡಿಸಿದ್ದರೂ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

ವಾರಂಟ್ ಹೊರಡಿಸಿದ್ದರೂ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ


ಮಂಗಳೂರು: 8 ಪ್ರಕರಣಗಳಲ್ಲಿ ಜಾಮೀನುರಹಿತ ವಾರಂಟ್ ಹೊರಡಿಸಲಾಗಿದ್ದರೂ ತಲೆಮರೆಸಿಕೊಂಡಿದ್ದ ಬೆಂಗ್ರೆ ಕಬೀರ್ ಮಂಜಿಲ್ ನಿವಾಸಿ ಕಬೀರ್ (30) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.


ಈತನ ವಿರುದ್ಧ ಪಣಂಬೂರು, ಮಂಗಳೂರು ದಕ್ಷಿಣ, ಮಂಗಳೂರು ಪೂರ್ವ, ಕಂಕನಾಡಿ, ಬಜಪೆ, ಉಪ್ಪಿನಂಗಡಿ ಪೊಲೀಸ್ ಠಾಣೆಗಳು ಸೇರಿದಂತೆ ಒಟ್ಟು 8 ಪ್ರಕರಣಗಳಲ್ಲಿ ಈತನ ವಿರುದ್ಧ ಎಫ್’ಐಆರ್ ದಾಖಲಾಗಿದ್ದು, 8 ಪ್ರಕರಣಗಳಲ್ಲಿ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು.

ಕಬೀರ್


ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಎರಡು ಬಾರಿ ವಾರೆಂಟ್ ಬಂದಿದ್ದರೂ ತಲೆಮರೆಸಿಕೊಂಡಿದ್ದ ಇನ್ನೋರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.


ಕೃಷ್ಣಾಪುರ ಚೊಕ್ಕಬೆಟ್ಟು 8ನೆ ಬ್ಲಾಕ್ ರೇಷ್ಮಾ ಮಂಜಿಲ್ ನಿವಾಸಿ ನಿಸಾರ್ ಹುಸೈನ್ ಬಂಧಿತ ಆರೋಪಿ. ಈತನ ವಿರುದ್ಧ ಸುರತ್ಕಲ್, ಪುತ್ತೂರು, ಮುಲ್ಕಿ, ಬರ್ಕೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

ನಿಸಾರ್ ಹುಸೈನ್
Join Whatsapp
Exit mobile version