ಬಾಲಕನ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಓರ್ವನ ಬಂಧನ: ಆರಗ ಜ್ಞಾನೇಂದ್ರ

Prasthutha|

ಬೆಂಗಳೂರು: ಬಸವನ ಬಾಗೇವಾಡಿ ತಾಲೂಕಿನಲ್ಲಿ ಏಳು ವರ್ಷದ ಬಾಲಕನ ಮೇಲೆ ನಡೆದ ಅಮಾನುಷ ದೌರ್ಜನ್ಯ ಘಟನೆಯ ಸಂಬಂಧ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ವಿಧಾನ ಪರಿಷತ್ ಗೆ ತಿಳಿಸಿದ್ದಾರೆ.

- Advertisement -

ಸದನದ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಥೋಡ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು,  ಸಾಮಾಜಿಕ ಜಾಲತಾಣದಲ್ಲಿ ಈ ಘಟನೆ ಕುರಿತು ಪ್ರಕಟವಾಗಿದೆ ಹಾಗೂ ಜಿಲ್ಲಾ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ ಎಂದರು.

ಪ್ರಕರಣದ ಬಗ್ಗೆ ತೀವ್ರ ನೋವಾಗಿದೆ. ಇದನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದು, ತಪ್ಪಿಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

- Advertisement -

ವಿರೋಧ ಪಕ್ಷದ ನಾಯಕ B. K.  ಹರಿಪ್ರಸಾದ್ ಸಹ ಮಾತನಾಡಿ, ಸೂಕ್ತ ಕ್ರಮಕ್ಕಾಗಿ ಆಗ್ರಹಿಸಿದರು.

ಸಭಾ ಪತಿ ಸ್ಥಾನದಲ್ಲಿದ್ದ ತೇಜಸ್ವಿನಿ ಗೌಡ ರವರೂ ದನಿಗೂಡಿಸಿ, ಇಂಥ ಅಮಾನವೀಯ ಪ್ರಕರಣ ಗಳು ನಡೆಯಬಾರದು ಎಂದು ಹೇಳಿದರು.



Join Whatsapp