Home ಟಾಪ್ ಸುದ್ದಿಗಳು ಬಾಲಕನ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಓರ್ವನ ಬಂಧನ: ಆರಗ ಜ್ಞಾನೇಂದ್ರ

ಬಾಲಕನ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಓರ್ವನ ಬಂಧನ: ಆರಗ ಜ್ಞಾನೇಂದ್ರ

ಬೆಂಗಳೂರು: ಬಸವನ ಬಾಗೇವಾಡಿ ತಾಲೂಕಿನಲ್ಲಿ ಏಳು ವರ್ಷದ ಬಾಲಕನ ಮೇಲೆ ನಡೆದ ಅಮಾನುಷ ದೌರ್ಜನ್ಯ ಘಟನೆಯ ಸಂಬಂಧ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ವಿಧಾನ ಪರಿಷತ್ ಗೆ ತಿಳಿಸಿದ್ದಾರೆ.

ಸದನದ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಥೋಡ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು,  ಸಾಮಾಜಿಕ ಜಾಲತಾಣದಲ್ಲಿ ಈ ಘಟನೆ ಕುರಿತು ಪ್ರಕಟವಾಗಿದೆ ಹಾಗೂ ಜಿಲ್ಲಾ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ ಎಂದರು.

ಪ್ರಕರಣದ ಬಗ್ಗೆ ತೀವ್ರ ನೋವಾಗಿದೆ. ಇದನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದು, ತಪ್ಪಿಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ವಿರೋಧ ಪಕ್ಷದ ನಾಯಕ B. K.  ಹರಿಪ್ರಸಾದ್ ಸಹ ಮಾತನಾಡಿ, ಸೂಕ್ತ ಕ್ರಮಕ್ಕಾಗಿ ಆಗ್ರಹಿಸಿದರು.

ಸಭಾ ಪತಿ ಸ್ಥಾನದಲ್ಲಿದ್ದ ತೇಜಸ್ವಿನಿ ಗೌಡ ರವರೂ ದನಿಗೂಡಿಸಿ, ಇಂಥ ಅಮಾನವೀಯ ಪ್ರಕರಣ ಗಳು ನಡೆಯಬಾರದು ಎಂದು ಹೇಳಿದರು.

Join Whatsapp
Exit mobile version