ಅರುಣ್ ಪುತ್ತಿಲ ಆಡಿಯೋ ವೈರಲ್ ವಿಚಾರದಲ್ಲಿ ಜೀವ ಬೆದರಿಕೆ: ಮಹಿಳೆಯಿಂದ ದೂರು ದಾಖಲು

Prasthutha|

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರದ್ದು ಎನ್ನಲಾದ ಆಡಿಯೋಗೆ ಸಂಬಂಧಿಸಿ ಮಹಿಳೆಯೊಬ್ಬಳು ತನಗೆ ಜೀವ ಬೆದರಿಕೆ ಒಡ್ಡಲಾಗಿದೆ ಎಂದು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ.

- Advertisement -


ಮೂಲತಃ ಶಿರಸಿ ಮೂಲದ, ಪ್ರಸಕ್ತ ಪುತ್ತೂರಿನ ಸಾಮೆತ್ತಡ್ಕದಲ್ಲಿ ವಾಸ್ತವ್ಯವಿರುವ ಮಹಿಳೆ ಈ ಬಗ್ಗೆ ಗುರುವಾರ ತಡರಾತ್ರಿ ದೂರು ನೀಡಿದ್ದಾರೆ.


ಆಡಿಯೋ ಸಂಬಂಧ ಹಲವಾರು ಬೆದರಿಕೆ ಕರೆಗಳು ಬರುತ್ತಿವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

- Advertisement -

ವೈರಲ್ ಆಡಿಯೋದಲ್ಲಿ ಏನಿದೆ..?

ನೀವು ಬಿಜೆಪಿಗೆ ಸೇರಿದ್ದು ನಾಚಿಕೆ ಆಗಲಿಲ್ವ ಎಂದು ಮಹಿಳೆ ಕೇಳಿದ್ದಾಳೆ. ಇದಕ್ಕೆ ಉತ್ತರಿಸಿದ ಅರುಣ್ ಪುತ್ತಿಲ ಅವರದ್ದೆನ್ನಲಾದ ಧ್ವನಿಯಲ್ಲಿ ‘ರಾಜಕೀಯದಲ್ಲಿ ನಾಚಿಗೆ, ಹೇಸಿಗೆ ಥೂ ಅದೆಲ್ಲಾ ಇಲ್ಲ’ ಎಂದು ಹೇಳಿದ್ದಾರೆ.

ನಾಚಿಕೆ, ಹೇಸಿಗೆಯನ್ನೆಲ್ಲಾ ಬಿಟ್ಟವರೇ ಪೊಲಿಟೀಶಿಯನ್ ಎನಿಸಿಕೊಳ್ಳುತ್ತಾರೆ. ಮಾನ ಮರ್ಯಾದೆ ಎರಡು ಬಿಡದಿದ್ದರೇ ಉನ್ನತ ಹುದ್ದೆಗೆ ಹೋಗಲು ಸಾಧ್ಯವಿಲ್ಲ. ಅದನ್ನು ಬಿಟ್ಟು ಪರಿವಾರದ ಜನ ದೊಡ್ಡವರಾಗಿದ್ದಾರೆ. ಇನ್ನು ಪರಿವಾರದ ಜನ 3.5 ಕೋಟಿ ರೂ. ಹಣ ಪಡೆದಿದ್ದಾರೆ ಅನ್ನೊ ಬಗ್ಗೆಯೂ ಮಾತನಾಡಲಾಗಿದೆ. ಇದಕ್ಕೆ ಪ್ರತಿಯಾಗಿ ಮಹಿಳೆ ‘ಸೌಶಯಾತ್ಮಾವೀ ಇನಶ್ಯತೀ’ ಎಂಬ ಸಂಸ್ಕೃತ ಶ್ಲೋಕ ಹೇಳಿದ್ದಾಳೆ. ಅಂದರೆ, ಸಂಶಯ ಪಟ್ಟವನು ನಾಶವಾಗುತ್ತಾನೆ. ನೀವು ನಾಶ ಆದ್ರಿ ಎಂದು ಮಹಿಳೆ ಮಾತನಾಡಿದ್ದಾಳೆ.

ಅರುಣ್ ಪುತ್ತಿಲ ಅವರ ಹಣ ತೆಗೆದುಕೊಂಡಿದ್ದರ ಬಗ್ಗೆ ಪರೋಕ್ಷವಾಗಿ ಆಡಿಯೋದಲ್ಲಿ ಒಪ್ಪಿಕೊಂಡಿದ್ದಾರೆ. ಇನ್ನು ಬಿಜೆಪಿ ನಾಯಕಿ ನೀವು ಬೆಂಗಳೂರಿನಲ್ಲಿ ಒಂಟಿಯಾಗಿ ಸಿಕ್ಕಾಗ ಹೆಚ್ಚಿನ ವಿಚಾರವನ್ನು ಮಾತನಾಡುವುದಾಗಿ ಹೇಳಿದ್ದಾರೆ. ಈಗ ಆಡಿಯೋ ರೆಕಾರ್ಡ್ ಮಾಡಿ ನಿಮಗೆ ಇವತ್ತು ಕಡ್ಡಿ ಇಟ್ಟಿದ್ದೇನೆ ಎಂದು ಮಹಿಳೆ ಹೇಳಿದ್ದಾರೆ.



Join Whatsapp
Exit mobile version