Home ಟಾಪ್ ಸುದ್ದಿಗಳು ಅರವಿಂದ್ ಕೇಜ್ರಿವಾಲ್ ಆರೋಗ್ಯ ಅಪಾಯದಲ್ಲಿದೆ: ಆಮ್ ಆದ್ಮಿ ಪಕ್ಷ ಆತಂಕ

ಅರವಿಂದ್ ಕೇಜ್ರಿವಾಲ್ ಆರೋಗ್ಯ ಅಪಾಯದಲ್ಲಿದೆ: ಆಮ್ ಆದ್ಮಿ ಪಕ್ಷ ಆತಂಕ

ನವದೆಹಲಿ: ನ್ಯಾಯಾಂಗ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯ ಅಪಾಯದಲ್ಲಿದೆ ಎಂದು ದೆಹಲಿ ಸರ್ಕಾರದ ಕ್ಯಾಬಿನೆಟ್ ಸಚಿವ ಅತಿಶಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೀವ್ರ ಮಧುಮೇಹ ಇರುವ ಕೇಜ್ರಿವಾಲ್ ಅವರ ದೇಹದ ಸಕ್ಕರೆ ಮಟ್ಟ ತೀವ್ರ ತರವಾಗಿ ಕಡಿಮೆಯಾಗಿದೆ.8.5 ಕೆಜಿ ತೂಕವನ್ನು ಅವರು ಕಳೆದುಕೊಂಡಿದ್ದು, ಐದು ಬಾರಿ ಅವರ ದೇಹದ ಸಕ್ಕರೆ ಮಟ್ಟ 50ಕ್ಕಿಂತಲೂ ಕಡಿಮೆಯಾಗಿದೆ. ಇದು ವಿಶೇಷವಾಗಿ ಮಧುಮೇಹಿಗಳಿಗೆ ಆತಂಕಕಾರಿ ಪರಿಸ್ಥಿತಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಒಂದು ವೇಳೆ ಕೇಜ್ರಿವಾಲ್ ಪಾರ್ಶ್ವವಾಯುವಿಗೆ ಒಳಗಾದರೆ, ಮೆದುಳು ಹಾನಿ, ಶಾಶ್ವತ ಹಾನಿಯಾದರೆ ಯಾರು ಜವಾಬ್ದಾರರು ಎಂದು ಪ್ರಶ್ನಿಸಿದ ಅವರು, ನಮ್ಮ ನಾಯಕ ಜೈಲಿನಲ್ಲಿರುವುದರಿಂದ ಸರಿಯಾಗಿ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

ಈ ವಿಷಯದ ಬಗ್ಗೆ ತಮ್ಮ ವಕೀಲರು ಮತ್ತು ವೈದ್ಯರೊಂದಿಗೆ ಸಮಾಲೋಚಿಸಲಾಗುತ್ತಿದೆ. ಅರವಿಂದ್ ಕೇಜ್ರಿವಾಲ್ ಅವರಿಗೆ ಏನಾದರೂ ಸಂಭವಿಸಿದರೆ ದೇಶ ಮಾತ್ರವಲ್ಲ, ದೇವರು ಕೂಡ ಬಿಜೆಪಿ‌ ನಾಯಕರನ್ನು ಕ್ಷಮಿಸುವುದಿಲ್ಲ ಎಂಬುದನ್ನು ಬಿಜೆಪಿ ಅರಿಯಬೇಕು ಎಂದು ಅವರು ಹೇಳಿದ್ದಾರೆ.

Join Whatsapp
Exit mobile version