ಅದಾನಿ ಬಂದರು ಡ್ರಗ್ಸ್ ಮತ್ತು ಬಿಜೆಪಿ ಶಾಸಕನ ಮಗ ಮಾಡಿದ ರೈತರ ಕೊಲೆ ಮರೆಮಾಚಲು ಆರ್ಯನ್ ಖಾನ್ ಟಾರ್ಗೆಟ್: ವಿಶಾಲ್

Prasthutha|

ಮುಂಬೈ: ಡ್ರಗ್ಸ್​ ಪಾರ್ಟಿ ಮಾಡಿ ಎನ್  ​ಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್ ​ಗೆ ಬಾಲಿವುಡ್ ​ನ ಅನೇಕ ಸೆಲೆಬ್ರಿಟಿಗಳು ಬೆಂಬಲ ಸೂಚಿಸಿದ್ದಾರೆ. ಈ ನಡುವೆ  ಖ್ಯಾತ ಸಂಗೀತ ನಿರ್ದೇಶಕ ಮತ್ತು ಗಾಯಕ ವಿಶಾಲ್​ ದದ್ಲಾನಿ ಅವರು, ಆರ್ಯನ್​ ಖಾನ್​ ಬಂಧನ ಒಂದು ಸಂಚು ಎಂದು ಅವರು ಆರೋಪಿಸಿದ್ದಾರೆ.

- Advertisement -

ಅದಾನಿ ಬಂದರಿನಲ್ಲಿ ಸಿಕ್ಕ 3 ಸಾವಿರ ಕೆಜಿ ಡ್ರಗ್ಸ್​ ಮತ್ತು ಬಿಜೆಪಿ ಶಾಸಕನ ಮಗ ಮಾಡಿದ ರೈತರ ಕೊಲೆ ಪ್ರಕರಣವನ್ನು ಮರೆಮಾಚಲು ಶಾರುಖ್​ ಖಾನ್​ ಮತ್ತು ಅವರ ಕುಟುಂಬವನ್ನು ಟಾರ್ಗೆಟ್​ ಮಾಡಲಾಗಿದೆ’ ಎಂದು ವಿಶಾಲ್​ ದದ್ಲಾನಿ ನೇರವಾಗಿ ಆರೋಪ ಮಾಡಿದ್ದಾರೆ. ‘ಕಳೆದ 30 ವರ್ಷದಲ್ಲಿ ಶಾರುಖ್​ ಖಾನ್​ ಜೊತೆ ಕೆಲಸ ಮಾಡಿದವರಲ್ಲಿ ಎಷ್ಟು ಜನರು ಈಗ ಅವರ ಪರವಾಗಿ ಇದ್ದೀರಿ’ ಎಂದು ಕೂಡ ಅವರು ಪ್ರಶ್ನಿಸಿದ್ದಾರೆ.

Join Whatsapp