ಹಿಂದೂಗಳು ಬಹುಸಂಖ್ಯಾತರಾಗಿರುವವರೆಗೆ ಮಾತ್ರ ಸಂವಿಧಾನ, ಕಾನೂನು: ನಿತಿನ್ ಪಟೇಲ್

Prasthutha|

ಅಹ್ಮದಾಬಾದ್: ಹಿಂದೂಗಳು ಬಹುಸಂಖ್ಯಾತರಾಗಿರುವವರೆಗೆ ಮಾತ್ರ ದೇಶದಲ್ಲಿ ಸಂವಿಧಾನ, ಕಾನೂನುಗಳು ಮತ್ತು ಜಾತ್ಯತೀತತೆ ಇರುತ್ತವೆ. ಹಿಂದೂಗಳು ಅಲ್ಪಸಂಖ್ಯಾತರಾದರೆ ಇವು ಯಾವುದೂ ಉಳಿಯುವುದಿಲ್ಲ ಎಂದು ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಹೇಳಿದ್ದಾರೆ.

- Advertisement -


ವಿಶ್ವ ಹಿಂದೂ ಪರಿಷತ್ ಗಾಂಧಿನಗರದಲ್ಲಿ ಆಯೋಜಿಸಿದ್ದ ಭಾರತ ಮಾತೆಯ ದೇವಾಲಯದ ಮೂರ್ತಿ ಪ್ರತಿಷ್ಠಾಪನೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ದೇಶದಲ್ಲಿ ಹಿಂದೂ ಬಹುಸಂಖ್ಯಾತರಾಗಿರುವ ವರೆಗೆ ಮಾತ್ರ ಸಂವಿಧಾನ, ಕಾನೂನು, ಜಾತ್ಯತೀತತೆ ಇರುತ್ತದೆ. ಆದರೆ ಇನ್ನೊಂದು 1000 ದಿಂದ 2000 ವರ್ಷಗಳಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾಗಿ ಇತರೆ ಜನರ ಸಂಖ್ಯೆಯು ಹೆಚ್ಚಾಗುತ್ತದೆ. ಆಗ ಇಲ್ಲಿ ಇವೆಲ್ಲವೂ ಗಾಳಿಗೆ ತೂರಲ್ಪಡುತ್ತವೆ ಎಂದು ಭವಿಷ್ಯ ನುಡಿದರು.
ಜಮೀಯತ್ ಉಲೇಮಾ -ಇ –ಹಿಂದ್ ಎಂಬ ಸಂಘಟನೆಯವರು ಗುಜರಾತ್ ಧಾರ್ಮಿಕ್ ಸ್ವಾತಂತ್ರ್ಯ ಸ್ವಾತಂತ್ರ್ಯ (ತಿದ್ದುಪಡಿ) ಕಾಯ್ದೆ, 2021 ರ ವಿರುದ್ಧ ನ್ಯಾಯಾಲಯಕ್ಕೆ ಹೋಗಿದ್ದಾರೆ ಎಂದು ಪಟೇಲ್ ಅಸಮಾಧಾನ ವ್ಯಕ್ತಪಡಿಸಿದರು.


‘ನಾನು ಎಲ್ಲಾ ಮುಸ್ಲಿಮರು, ಕ್ರಿಶ್ಚಿಯನ್ನರನ್ನು ಉದ್ದೇಶಿಸಿ ಮಾತನಾಡುತ್ತಿಲ್ಲ. ಏಕೆಂದರೆ ಅವರಲ್ಲೂ ಹೆಚ್ಚಿನವರು ದೇಶಪ್ರೇಮಿಗಳಾಗಿದ್ದಾರೆ. ಲಕ್ಷಾಂತರ ಕ್ರಿಶ್ಚಿಯನ್ ಹಾಗೂ ಮುಸ್ಲಿಮರು ದೇಶಭಕ್ತರಾಗಿದ್ದಾರೆ. ಸಾವಿರಾರು ಮುಸ್ಲಿಮರು ಸೇನೆ ಹಾಗೂ ಗುಜರಾತ್ ಪೊಲೀಸ್ ಪಡೆಯಲ್ಲಿದ್ದಾರೆ. ಆದರೆ ದೇಶಭಕ್ತಿ ಹೊಂದಿಲ್ಲದವರ ಬಗ್ಗೆ ಹೇಳುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

Join Whatsapp