Home ಟಾಪ್ ಸುದ್ದಿಗಳು ರಾಜ್ಯೋತ್ಸವದ ಅಂಗವಾಗಿ ನವೆಂಬರ್ ತಿಂಗಳಲ್ಲಿ ಆಕರ್ಷಕ ರಿಯಾಯಿತಿಯಲ್ಲಿ ಕಸಾಪ ಪುಸ್ತಕ ಮಾರಾಟ

ರಾಜ್ಯೋತ್ಸವದ ಅಂಗವಾಗಿ ನವೆಂಬರ್ ತಿಂಗಳಲ್ಲಿ ಆಕರ್ಷಕ ರಿಯಾಯಿತಿಯಲ್ಲಿ ಕಸಾಪ ಪುಸ್ತಕ ಮಾರಾಟ

ಬೆಂಗಳೂರು: 67 ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವಿಶೇಷ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಹಮ್ಮಿಕೊಂಡಿದೆ. ನವೆಂಬರ್ ಮಾಸಾದ್ಯಂತ ಆಕರ್ಷಕ ರಿಯಾಯತಿಯ ದರದಲ್ಲಿ ಪರಿಷತ್ತಿನ ಪ್ರಕಟಣೆಯ ಪುಸ್ತಕಗಳನ್ನು ಮಾರಾಟಮಾಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನವೆಂಬರ್ 1ರಿಂದ 30ರವರೆಗೆ ಪ್ರತಿದಿನ ಬೆಳಗ್ಗೆ 9 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ನಗರದ ಚಾಮರಾಜ ಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿ ಆವರಣದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮಳಿಗೆ ಆರಂಭಿಸಲಾಗುತ್ತಿದೆ. ಶೇ.10 ರಿಂದ ಶೇ.75 ರಷ್ಟು ರಿಯಾಯಿತಿ ದರದಲ್ಲಿ ಅಮೂಲ್ಯವಾದ ಪುಸ್ತಕಗಳ ಮಾರಾಟದ ವ್ಯವಸ್ಥೆ ಮಾಡಲಾಗಿದೆ.

ಕನ್ನಡ ಸಾಹಿತ್ಯ ಇತಿಹಾಸದಲ್ಲಿ ತೀರಾ ಅಪರೂಪವೆನಿಸಿದ ಪುಸ್ತಕಗಳ ಪ್ರಕಟಣೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತ ಬಂದಿದ್ದು, ಪರಿಷತ್ತು ಪ್ರಕಟಿಸಿರುವ ಎಲ್ಲಾ ಪ್ರಕಟಣೆಗಳು ಮಾರಾಟಕ್ಕೆ ಲಭ್ಯವಾಗಿವೆ. ಕನ್ನಡ ರತ್ನಕೋಶ ಮತ್ತು ಸಂಕ್ಷಿಪ್ತ ಕನ್ನಡ ನಿಘಂಟು, ಸಂಕ್ಷಿಪ್ತ ಕನ್ನಡ ಇಂಗ್ಲಿಷ್ ನಿಘಂಟು, ಬೃಹತ್ ಕನ್ನಡ-ಕನ್ನಡ ನಿಘಂಟು, ಪರೀಕ್ಷೆ ಪುಸ್ತಕಗಳು, ಗದ್ಯಾನುವಾದ, ಶತಮಾನೋತ್ಸವ ಮಾಲಿಕೆ ಪುಸ್ತಕಗಳು, ಆಧುನಿಕ ಕನ್ನಡ ಸಾಹಿತ್ಯ ಚರಿತ್ರೆ ಎಲ್ಲಾ ಸಂಪುಟಗಳು, ಮಹಿಳಾ ಸಾಹಿತ್ಯ ಸಂಪುಟಗಳು, ದಲಿತ ಸಾಹಿತ್ಯ ಸಂಪುಟಗಳು, ಜೀವನ ಚರಿತ್ರೆಗಳು, ಪಿ.ಎಚ್.ಡಿ ಪುಸ್ತಕಗಳು, ಜಿಲ್ಲಾ ಸಾಹಿತ್ಯ ಸಮ್ಮೇಳನದ ಪುಸ್ತಕಗಳು, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣಿಕೆಗಳು ಹಾಗೂ ಇತರೆ ಪ್ರಕಟಣೆಗಳು ಮಾರಾಟಕ್ಕೆ ಲಭ್ಯವಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಣೆಯಲ್ಲಿ ತಿಳಿಸಿದೆ.

Join Whatsapp
Exit mobile version