Home ಕರಾವಳಿ ಉಳ್ಳಾಲದ ಸೋಮೇಶ್ವರ ಸಮುದ್ರ ತೀರದಲ್ಲಿ ಕೇರಳದ ವಿದ್ಯಾರ್ಥಿಗಳ ಮೇಲೆ ನಡೆಸಿದ ಮಾರಣಾಂತಿಕ ಹಲ್ಲೆ ಖಂಡನೀಯ :...

ಉಳ್ಳಾಲದ ಸೋಮೇಶ್ವರ ಸಮುದ್ರ ತೀರದಲ್ಲಿ ಕೇರಳದ ವಿದ್ಯಾರ್ಥಿಗಳ ಮೇಲೆ ನಡೆಸಿದ ಮಾರಣಾಂತಿಕ ಹಲ್ಲೆ ಖಂಡನೀಯ : ಅಶ್ರಫ್ ಬಡಾಜೆ

ಮಂಜೇಶ್ವರ : ಉಳ್ಳಾಲದ ಸೋಮೇಶ್ವರ ಸಮುದ್ರ ತೀರದಲ್ಲಿ ಕೇರಳದ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ದುಶ್ಕರ್ಮಿಗಳ ಕೃತ್ಯವನ್ನು ಎಸ್.ಡಿ.ಪಿ.ಐ ಮಂಜೇಶ್ವರ ಮಂಡಲ ಅಧ್ಯಕ್ಷ ಅಶ್ರಫ್ ಬಡಾಜೆ ತೀವ್ರವಾಗಿ ಖಂಡಿಸಿದ್ದಾರೆ.

ಉಳ್ಳಾಲದ ಕ್ಷೇತ್ರ ವ್ಯಾಪ್ತಿಗೊಳಪಟ್ಟ ಸೋಮೇಶ್ವರ ಸಮುದ್ರ ತೀರದಲ್ಲಿ ಅನೈತಿಕ ಪೋಲೀಸ್ ಗಿರಿಯ ಮೂಲಕ ಕೇರಳದ ವಿದ್ಯಾರ್ಥಿಗಳ ಮೇಲೆ ನಡೆಸಲಾದ ಮಾರಣಾಂತಿಕ ಹಲ್ಲೆ ಖಂಡನೀಯ. ಕಾಂಗ್ರೆಸ್ ಸರಕಾರ ಅಧಿಕಾರವಹಿಸಿ ಒಂದು ತಿಂಗಳೊಳಗಾಗಿ ಕೋಮುವಾದಿ ಸಮಾಜದ್ರೋಹಿಗಳ ಅಟ್ಟಹಾಸ ಭುಗಿಲೆದ್ದಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಲಾಖೆಯು ಸಂಪೂರ್ಣವಾಗಿ ನಿಷ್ಕ್ರಿಯವಾಗಿರುವ ಸ್ಥಿತಿಯಲ್ಲಿ ಕೋಮುವಾದಿಗಳು ಸಂದರ್ಭವನ್ನುಪಯೋಗಿಸಿ ವ್ಯಾಪಕವಾಗಿ ಕೋಮುಗಲಭೆಗಳನ್ನು ನಡೆಸಲು ತಂತ್ರಗಳನ್ನು ರೂಪಿಸುತ್ತಿದ್ದಾರೆ. ಹಲ್ಲೆಕೋರರ ಮೇಲೆ ಗೂಂಡಾ ಕಾಯ್ದೆಯಂತಹ ಕಠಿಣ ಕಾಯ್ದೆಗಳನ್ನು ಹಾಕಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಶ್ರಫ್ ಬಡಾಜೆ ಆಗ್ರಹಿಸಿದ್ದಾರೆ.

Join Whatsapp
Exit mobile version