ಬೆಂಗಳೂರು ಕಂಬಳ ಕೆರೆಗೆ ಚಾಲನೆ ನೀಡಿದ ಅಶ್ವಿನಿ ಪುನಿತ್ ರಾಜಕುಮಾರ್

Prasthutha|

ಬೆಂಗಳೂರು: ಕಂಬಳ ಕೆರೆಗೆ ಯುವರತ್ನ ಡಾ. ಪುನಿತ್ ರಾಜಕುಮಾರ್ ಪತ್ನಿ ಅಶ್ವಿನಿ ಪುನಿತ್ ರಾಜಕುಮಾರ್ ಅವರು ಶನಿವಾರ ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಚಾಲನೆ ನೀಡಿದರು.

- Advertisement -

ನಮ್ಮ ಕಂಬಳ, ಬೆಂಗಳೂರು ಕಂಬಳ ಎಂಬ ಹೆಸರಿನಲ್ಲಿ ಶನಿವಾರ ಮತ್ತು ಭಾನುವಾರ (ನ.25, 26) ಎರಡು ದಿನಗಳ ಕಾಲ ಪಂದ್ಯ ನಡೆಯಲಿದೆ.

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಂಸದ ಸದಾನಂದ ಗೌಡ, ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಎಸ್.ಆರ್.ವಿಶ್ವನಾಥ್ ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

Join Whatsapp