Home ಟಾಪ್ ಸುದ್ದಿಗಳು ದೆಹಲಿ ಸಚಿವ ಮನೀಶ್ ಸಿಸೋಡಿಯಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಮ್ ಮುಖ್ಯಮಂತ್ರಿ

ದೆಹಲಿ ಸಚಿವ ಮನೀಶ್ ಸಿಸೋಡಿಯಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಮ್ ಮುಖ್ಯಮಂತ್ರಿ

ನವದೆಹಲಿ: ನನ್ನ ಮೇಲೆ ಮಾನಹಾನಕಾರಿ ಆರೋಪ ಮಾಡಿದ್ದಾರೆ ಎಂಬ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರದ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವುದಾಗಿ ಅಸ್ಸಾಮ್ ಮುಖ್ಯಮಂತ್ರಿ ಹಿಮಂತ ಶರ್ಮಾ ತಿಳಿಸಿದ್ದಾರೆ.

ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಪಿಪಿಇ ಗುತ್ತಿಗೆ ನೀಡುವಲ್ಲಿ ಅವ್ಯವಹಾರ ನಡೆದಿದೆ ಎಂದು ಇತ್ತೀಚೆಗೆ ಅಸ್ಸಾಮ್ ಮುಖ್ಯಮಂತ್ರಿ ಹಿಮಂತ ಬಿಸ್ವಾ ವಿರುದ್ಧ ಆರೋಪಿಸಿದ ಹಿನ್ನೆಲೆಯಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಅವರ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಅಲ್ಲದೆ ಈ ಹಿಂದೆ ಹಿಮಂತ ಶರ್ಮಾ ಅವರ ಪತ್ನಿ ರಿಕಿನಿ ಭುಯಾನ್ ಶರ್ಮಾ ಕೂಡ ಸಿಸೋಡಿಯಾ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

Join Whatsapp
Exit mobile version