ವಿದ್ಯಾರ್ಥಿ ನಾಯಕನ ಕಗ್ಗೊಲೆ: ಪರಾರಿಯಾಗಲೆತ್ನಿಸಿದ ಪ್ರಮುಖ ಆರೋಪಿ ರಸ್ತೆ ಅಪಘಾತದಲ್ಲಿ ಸಾವು

Prasthutha|

ಗುವಾಹಟಿ: ಅಸ್ಸಾಂನಲ್ಲಿ ವಿದ್ಯಾರ್ಥಿ ನಾಯಕ ಅನಿಮೇಶ್ ಭುಯಾನ್ (28) ಎಂಬಾತನನ್ನು ಕೊಲೆಗೈದು ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಪ್ರಮುಖ ಆರೋಪಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.

- Advertisement -

ಅಸ್ಸಾಂ ನ ಜೋರ್ಹತ್ ಪಟ್ಟಣದ ಜನನಿಬಿಡ ಪ್ರದೇಶದಲ್ಲಿ ಅಸ್ಸಾಂ ವಿದ್ಯಾರ್ಥಿ ಒಕ್ಕೂಟ (ಎಎಎಸ್ಯು) ನಾಯಕನನ್ನು ಥಳಿಸಿ ಭೀಕರವಾಗಿ ಹತ್ಯೆ ನಡೆಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ 13 ಮಂದಿಯಲ್ಲಿ ನೀರಜ್ ದಾಸ್ ಎಂಬಾತ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾನೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.

ಆರೋಪಿ ನೀರಜ್ ದಾಸ್ ನನ್ನು ಮಹಜರು ಮಾಡಲು ಘಟನಾ ಸ್ಥಳಕ್ಕೆ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಪೊಲೀಸ್ ವಾಹನದಿಂದ ಜಿಗಿದು ಪರಾರಿಯಾಗಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಪೊಲೀಸ್ ಬೆಂಗಾವಲು ವಾಹನ ಡಿಕ್ಕಿಯಾಗಿ ಸಾವನ್ನಪ್ಪಿದ್ದಾನೆ.

- Advertisement -

ಗಂಭೀರವಾಗಿ ಗಾಯಗೊಂಡ ದಾಸ್ ನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟಿರುವುದನ್ನು ವೈದ್ಯರು ಖಚಿತಪಡಿಸಿರುವುದಾಗಿ ಎಂದು ತನಿಖಾಧಿಕಾರಿ ಜೈನ್ ಮಾಹಿತಿ ನೀಡಿದ್ದಾರೆ.

Join Whatsapp