ಪೊಲೀಸರ ಮೇಲೆ ಹಲ್ಲೆ: ಐವರು ಆರೋಪಿಗಳಿಗೆ ಗುಂಡೇಟು

Prasthutha|

ಗಂಗಾವತಿ: ಹಂದಿ ಫಾರಂ ಮಾಲಿಕನಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಐವರು ಆರೋಪಿಗಳನ್ನು ಬಂಧಿಸುವ ವೇಳೆ, ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ, ಪೊಲೀಸರು ಫೈರಿಂಗ್ ಮಾಡಿದ ಘಟನೆ ತಾಲ್ಲೂಕಿನ ಮುಸ್ಟೂರು ಬಳಿ ಮೇಲೆ ಶುಕ್ರವಾರ ನಡೆದಿದೆ.

- Advertisement -


ಆರೋಪಿಗಳಾದ ಅಶೋಕ ಬೆಳ್ಳಟ್ಟಿ ಮತ್ತು ಶಂಕರ್ ಸಿಂಧನೂರು ಗಾಯಗೊಂಡಿದ್ದಾರೆ.

ಡಕಾಯಿತಿ ಕೇಸ್ ನ ಐವರು ಆರೋಪಿಗಳು ಪರಾರಿಯಾಗಿದ್ದು, ಅವರನ್ನು ಬಂಧಿಸುವ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಫೈರಿಂಗ್ ಮಾಡಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

Join Whatsapp