ವಿಧಾನಸಭೆ ಚುನಾವಣೆ: ಅಖಾಡಕ್ಕಿಳಿದ ದ.ಕ. ಪೊಲೀಸರು, ಜಿಲ್ಲೆಯಾದ್ಯಂತ ಬಿಗಿ ತಪಾಸಣೆ

Prasthutha|

ಮಂಗಳೂರು: ವಿಧಾನಸಭಾ ಚುನಾವಣೆಗೆ ವೇಳಾಪಟ್ಟಿ ಘೋಷಣೆಗೆ ದಿನ ಸಮೀಪಿಸುತ್ತಿರುವಂತೆಯೇ ಚುನಾವಣಾ ಆಯೋಗವು ಮತದಾರರಿಗೆ ಆಮಿಷವೊಡ್ಡುವವರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಜಿಲ್ಲೆಯಾದ್ಯಂತ ಬಿಗಿ ತಪಾಸಣೆ ನಡೆಯುತ್ತಿದೆ.

- Advertisement -


ಅಕ್ರಮ ತಡೆಯುವುದಕ್ಕಾಗಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪೊಲೀಸರು ತಪಾಸಣೆ ಬಿಗಿಗೊಳಿಸಿದ್ದಾರೆ. ಗಡಿ ಪ್ರದೇಶ ಹಾಗೂ ಆಯಕಟ್ಟಿನ ಜಾಗದಲ್ಲಿ ವಿಶೇಷ ಕಣ್ಗಾವಲಿಟ್ಟಿದ್ದಾರೆ.


ಇದಲ್ಲದೆ ನಗರದ 11 ಚೆಕ್ ಪೋಸ್ಟ್ ಗಳಲ್ಲಿ ನಿರಂತರವಾಗಿ ತಪಾಸಣೆ ನಡೆಯುತ್ತಿದೆ. ಜತೆಗೆ ಆರೇಳು ಕಡೆಗಳಲ್ಲಿ ದಿಢೀರ್ ತಪಾಸಣೆ ನಡೆಸಲಾಗುತ್ತಿದೆ. ಏಳು ಅಂತಾರಾಜ್ಯ ಚೆಕ್ ಪೋಸ್ಟ್ ಗಳಲ್ಲಿಯೂ ನಿರಂತರ ಬಿಗಿ ತಪಾಸಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಹೇಳಿದ್ದಾರೆ.



Join Whatsapp