ಸಹಾಯಕ ಪ್ರಾಧ್ಯಾಪಕರ ಹುದ್ದೆ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ಉಪನ್ಯಾಸಕಿ ಸೆರೆ

Prasthutha|

ಬೆಂಗಳೂರು: ಕನ್ನಡ ಪರೀಕ್ಷಾ ಪ್ರಾಧಿಕಾರ ನಡೆಸಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಉಪನ್ಯಾಸಕಿ ಸೌಮ್ಯ ಎಂಬವರನ್ನು ಮಲೇಶ್ವರಂ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸೌಮ್ಯಳನ್ನು ಮೈಸೂರಿನಲ್ಲಿ ಬಂಧಿಸಿ ನಗರಕ್ಕೆ ಕರೆತಂದ ಮಲೇಶ್ವರಂ ಪೊಲೀಸರು ನಿನ್ನೆ ಸರ್ಕಾರಿ ರಜೆ ಹಿನ್ನಲೆಯಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇಂದು ಮತ್ತೆ ಕಸ್ಟಡಿಗೆ ಪಡೆದು ಸೌಮ್ಯ ವಿಚಾರಣೆ ನಡೆಸಲಿದ್ದಾರೆ. ಜೊತೆಗೆ 32ನೇ ಎಸಿಎಂಎಂ ಕೋರ್ಟ್​ಗೆ ಸೌಮ್ಯ ಕಸ್ಟಡಿ ನೀಡುವಂತೆ ಮನವಿ ಮಾಡಲಿದ್ದಾರೆ.

- Advertisement -


ಆರೋಪಿ ಸೌಮ್ಯ ಮೈಸೂರು ವಿವಿ ಭೂಗೋಳಶಾಸ್ತ್ರ ವಿಭಾಗದಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದಾರೆ. ಮೈಸೂರು ವಿವಿಯಲ್ಲಿ ಎಂಎಸ್​ಸಿ ಓದಿರುವ ಸೌಮ್ಯ, ಪ್ರೊಫೆಸರ್ ಹೆಚ್.ನಾಗರಾಜ್ ಎಂಬುವರ ಬಳಿ ಪಿಹೆಚ್​ಡಿ ಮುಗಿಸಿದ್ದಾರೆ. ಜಿಐಎಸ್ ಅಂಡ್ ಅಗ್ರಿಕಲ್ಚರ್ ಜಿಯಾಗ್ರಫಿಯಲ್ಲಿ ಪಿಹೆಚ್​ಡಿ ಮಾಡಿದ್ದಾರೆ. ಸದ್ಯ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿದ್ದಾರೆ.


ಕಳೆದ ಮಾರ್ಚ್​ನಲ್ಲಿ ನಡೆದ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಪರೀಕ್ಷೆಯನ್ನು ಮೈಸೂರಿನ ಕುವೆಂಪು ನಗರದ ಪಿಯುಸಿ ಕಾಲೇಜು ಸೆಂಟರ್​ನಲ್ಲಿ ಪರೀಕ್ಷೆ ಬರೆದಿದ್ದರು. ಪರೀಕ್ಷೆ ಆರಂಭದ 1 ಗಂಟೆ ಮುಂಚಿತವಾಗಿ ಗೆಳತಿ ಒಬ್ಬಳಿಗೆ 18 ಪ್ರಶ್ನೋತ್ತರಗಳ ಮಾಹಿತಿಯನ್ನು ವಾಟ್ಸಾಪ್​ನಲ್ಲಿ ಕಳಿಸಿದ್ದರು. ಆಕೆಯಿಂದ ಬೆಂಗಳೂರಿನ ರಾಮಕೃಷ್ಣ ಎಂಬುವರಿಗೆ ಮಾಹಿತಿ ಶೇರ್ ಆಗಿತ್ತು. ಸೌಮ್ಯಾಗೆ ಪ್ರಶ್ನೆಗಳು ಸಿಕ್ಕ ಬಗ್ಗೆ ಪೊಲೀಸರು ವಿಚಾರಣೆ ನಡೆಸಿ ಮಾಹಿತಿ ಪಡೆಯಲಿದ್ದಾರೆ.

Join Whatsapp