ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ ಸಹ ಪ್ರಾಧ್ಯಾಪಕ : ಸಿಸಿಟಿವಿಯಲ್ಲಿ ದೃಶ್ಯ ಸೆರೆ

Prasthutha|

ಮಧ್ಯಪ್ರದೇಶ: ಇಲ್ಲಿನ ಕಾಲೇಜೊಂದರಲ್ಲಿ ಪ್ರಾಧ್ಯಾಪಕ  ಮತ್ತು ಪ್ರಾಂಶುಪಾಲರು ಹೊಡೆದಾಡಿಕೊಂಡ ಘಟನೆ ನಡೆದಿದೆ. ಈ ದೃಶ್ಯ ಸಿಸಿಟಿವಿ ಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

- Advertisement -

ಮಧ್ಯಪ್ರದೇಶದ ಉಜ್ಜಯನಿಯ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು,  ಬ್ರಹ್ಮದೀಪ ಅಲುನೆ ಎನ್ನುವ ಸಹಪ್ರಾಧ್ಯಾಪಕ ಕಾಲೇಜಿನ ಪ್ರಾಂಶುಪಾಲರಾದ ಡಾ. ಶೇಖರ್ ಮೆಡ್ಮಾವರ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಉಜ್ಜಯಿನಿಯ ಘಟ್ಟಿ ಪ್ರದೇಶದ ದಿವಂಗತ ನಾಗುಲಾಲ್ ಮಾಳವೀಯ ಸರ್ಕಾರಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

Join Whatsapp