Home ಟಾಪ್ ಸುದ್ದಿಗಳು ದಲಿತ ರಾಜ್ಯಪಾಲರನ್ನು ನಿಂದಿಸಿದ್ದಕ್ಕೆ ಕಾಂಗ್ರೆಸ್ ಮೇಲೆ ಅಟ್ರಾಸಿಟಿ ಕೇಸ್ ಹಾಕಬೇಕು: ಸಿಟಿ ರವಿ

ದಲಿತ ರಾಜ್ಯಪಾಲರನ್ನು ನಿಂದಿಸಿದ್ದಕ್ಕೆ ಕಾಂಗ್ರೆಸ್ ಮೇಲೆ ಅಟ್ರಾಸಿಟಿ ಕೇಸ್ ಹಾಕಬೇಕು: ಸಿಟಿ ರವಿ

ಬೆಂಗಳೂರು: ದಲಿತ ಸಮುದಾಯದ ರಾಜ್ಯಪಾಲರನ್ನು ಕಾಂಗ್ರೆಸ್‌ನವರು ನಿಂದಿಸಿದ್ದಾರೆ. ಪೊಲೀಸರು ಕಾಂಗ್ರೆಸ್‌ನವರ ಮೇಲೆ ಅಟ್ರಾಸಿಟಿ ದೂರು ದಾಖಲಿಸಬೇಕು ಎಂದು ಬಿಜೆಪಿ ಮುಖಂಡ ಸಿಟಿ ರವಿ ಹೇಳಿದರು.

ಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉಪ್ಪು ತಿಂದವ ನೀರು ಕುಡಿಯಬೇಕು, ತಪ್ಪು ಮಾಡಿದವನಿಗೆ ಶಿಕ್ಷೆ ಆಗಬೇಕು. ಭ್ರಷ್ಟಾಚಾರ ಮುಚ್ಚಿಕೊಳ್ಳುವ ಮಾತಾಡಬೇಡಿ. ಕಾಂಗ್ರೆಸ್‌ ಗೆ ಸೇರಿದ ಮೇಲೆ ಆತ್ಮಸಾಕ್ಷಿ ಮಾರ್ಕೊಂಡಿದ್ದೀರಾ, ಹೈಕಮಾಂಡ್ ಒತ್ತಡಕ್ಕೆ ಭ್ರಷ್ಟಾಚಾರ, ಲೂಟಿ ಮಾಡುವ ಅನಿವಾರ್ಯತೆ ಬಂದಿರಬೇಕು ಎಂದು ಹರಿಹಾಯ್ದರು.

ರಾಜ್ಯಪಾಲರು ನ್ಯಾಯಯುತ ತನಿಖೆ ನಡೆಯಲಿ ಎಂದು ಅನುಮತಿ ಕೊಟ್ಟಿದ್ದಾರೆ. ಅವರು ತನಿಖೆಗಷ್ಟೇ ಅನುಮತಿ ಕೊಟ್ಟಿದ್ದಾರೆ. ಆದರೆ ಕಾಂಗ್ರೆಸ್‌ನವರು ರಾಜ್ಯಪಾಲರ ಪ್ರತಿಕೃತಿ ದಹಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ. ಚೋರ್ ಉಲ್ಟಾ ಕೊತ್ವಾಲ್ ಕೊ ಡಾಂಟಾ ಅನ್ನುವಂತಾಗಿದೆ. ದಲಿತ ಸಮುದಾಯದ ರಾಜ್ಯಪಾಲರನ್ನು ಕಾಂಗ್ರೆಸ್‌ನವರು ನಿಂದಿಸಿದ್ದಾರೆ. ಪೊಲೀಸರು ಕಾಂಗ್ರೆಸ್‌ನವರ ಮೇಲೆ ಅಟ್ರಾಸಿಟಿ ದೂರು ದಾಖಲಿಸಬೇಕು ಎಂದು ಹೇಳಿದರು.

ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಾಗ ಸಿದ್ದರಾಮಯ್ಯ ಏನು ಹೇಳಿದರು ಎಂಬುದನ್ನು ನೆನಪಿಸಿಕೊಳ್ಳಲಿ. ರಾಜ್ಯಪಾಲರು ಸಂವಿಧಾನ ಬದ್ಧ ತೀರ್ಮಾನ ತೆಗೆದುಕೊಂಡಿದ್ದಾರೆ. ನ್ಯಾಯಯುತ ತನಿಖೆಗೆ ಯಡಿಯೂರಪ್ಪ ರಾಜೀನಾಮೆ ಕೊಡಬೇಕು ಅಂದಿದ್ದರು. ಸಿಎಂಗೆ ಮರೆವಿನ ಕಾಯಿಲೆ ಇದೆ. ಆವತ್ತು ಅವರು ಆಡಿದ ಮಾತು ಇವತ್ತು ನಾವು ನೆನಪು ಮಾಡಿಕೊಡುತ್ತಿದ್ದೇವೆ. ಅದೇ ರಾಜಭವನ, ಅದೇ ಅಧಿಕಾರ ಇವತ್ತಿನ ರಾಜ್ಯಪಾಲರಿಗೂ ಇದೆ. ಆಗ ಪ್ರಾಸಿಕ್ಯೂಷನ್ ಯಡಿಯೂರಪ್ಪ ಮೇಲಿತ್ತು, ಈಗ ನಿಮ್ಮ ಮೇಲಿದೆ. ಪಾತ್ರಧಾರಿಗಳಷ್ಟೇ ಬದಲು, ಈಗ ನಿಮ್ಮ ಮಾತಿನಂತೆ ನೀವು ರಾಜೀನಾಮೆ ಕೊಡಿ ಎಂದು ಆಗ್ರಹಿಸಿದರು.

Join Whatsapp
Exit mobile version