ಕಾವೂರು | ಕರ್ತವ್ಯ ನಿರತ ಪೊಲೀಸರ ಮೇಲೆ ಮತ್ತೊಂದು ದಾಳಿ

Prasthutha|

ಮಂಗಳೂರು : ನಗರದ ಕಾವೂರು ಠಾಣಾ ವ್ಯಾಪ್ತಿಯ ಚೆಕ್ ಪೋಸ್ಟ್ ಒಂದರ ಬಳಿ ಕರ್ತವ್ಯ ನಿರತರಾಗಿದ್ದ ಪೊಲೀಸರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿರುವುದಾಗಿ ವರದಿಯೊಂದು ತಿಳಿಸಿದೆ. ನಗರದಲ್ಲಿ ಪೊಲೀಸರ ಮೇಲೆ ನಡೆದ ಮತ್ತೊಂದು ದಾಳಿ ಇದಾಗಿದೆ.

- Advertisement -

ಕಾವೂರು ಠಾಣೆ ವ್ಯಾಪ್ತಿಯ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಬೈಕ್ ನಲ್ಲಿ ಆಗಮಿಸಿದ ನಾಲ್ವರು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ.

ಪೊಲೀಸರಲ್ಲಿದ್ದ ಬಂದೂಕುಗಳನ್ನು ಕಿತ್ತುಕೊಂಡು ದುಷ್ಕರ್ಮಿಗಳು ನೆಲಕ್ಕೆ ಹೊಡೆದು ಧ್ವಂಸಗೊಳಿಸಿದ್ದಾರೆ ಎನ್ನಲಾಗಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಹೆಚ್ಚುವರಿ ಪೊಲೀಸರು ನಾಲ್ವರನ್ನೂ ವಶಕ್ಕೆ ಪಡೆದಿದ್ದಾರೆ.

- Advertisement -

ವಶಕ್ಕೆ ಪಡೆಯಲಾದ ಎಲ್ಲರೂ ನಗರದ ಕಾಲೇಜೊಂದರ ವಿದ್ಯಾರ್ಥಿಗಳು ಎನ್ನಲಾಗಿದೆ. ವಶಕ್ಕೆ ಪಡೆಯಲಾದವರು ಮಾದಕ ದ್ರವ್ಯದ ನಶೆಯಲ್ಲಿದ್ದರು ಎಂದು ಪೊಲೀಸರು ಹೇಳಿದ್ದಾರೆ. ವಿಷಯಕ್ಕೆ ಸಂಬಂಧಿಸಿ ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.     

Join Whatsapp