ಸಾಹಿತಿ ಭಗವಾನ್ ಮುಖಕ್ಕೆ ಮಸಿ ಬಳಿದ ನ್ಯಾಯವಾದಿ ಮೀರಾ ರಾಘವೇಂದ್ರ

Prasthutha|

ಬೆಂಗಳೂರು : ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆಪಾದಿಸಿ ಸಾಹಿತಿ ಭಗವಾನ್ ಮುಖಕ್ಕೆ ನ್ಯಾಯವಾದಿ ಮೀರಾ ರಾಘವೇಂದ್ರ ಮಸಿ ಬಳಿದ ಘಟನೆ ನಡೆದಿದೆ. ನಗರದ 2ನೇ ಎಸಿಎಂಎಂ ನ್ಯಾಯಾಲಯದ ಆವರಣದಲ್ಲಿ ಈ ಘಟನೆ ನಡೆದಿದೆ.

- Advertisement -

ಹಿಂದೂ ಧರ್ಮಕ್ಕೆ ಅವಮಾನ ಮಾಡಿದ್ದಾರೆ ಎಂದು ಆಪಾದಿಸಿ ಮೀರಾ ರಾಘವೇಂದ್ರ ಖಾಸಗಿ ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ಭಗವಾನ್ ರವರು ಇಂದು ಕೋರ್ಟ್ ಗೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಭಗವಾನ್ ಗೆ ಜಾಮೀನು ಮಂಜೂರು ಮಾಡಿದೆ.

ಇದಾದ ಬಳಿಕ ಭಗವಾನ್ ಕೋರ್ಟ್ ನಿಂದ ಹೊರಗೆ ಬಂದಾಗ ಹತಾಶಳಾದಂತೆ ಕಂಡುಬಂದ ಮೀರಾ ರಾಘವೇಂದ್ರ ಈ ಕೃತ್ಯ ಎಸಗಿದ್ದಾರೆ. ಈ ಬಗ್ಗೆ ಸ್ವತಃ ಮೀರಾ ರಾಘವೇಂದ್ರ ವೀಡಿಯೊವೊಂದನ್ನು ಟ್ವೀಟ್ ಮಾಡಿದ್ದಾರೆ.

- Advertisement -

ಹಿಂದೂ ಪದದ ಬಗ್ಗೆ ಭಗವಾನ್ ನೀಡಿದ್ದ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

Join Whatsapp