ಮಂಗಳೂರು | ಅಡ್ಡೂರಿನಲ್ಲಿ ಯುವಕನ ಮೇಲೆ ತಲವಾರು ದಾಳಿ; ಗಾಯಾಳು ಆಸ್ಪತ್ರೆಗೆ ದಾಖಲು

Prasthutha|

ಮಂಗಳೂರು : ನಗರದ ಹೊರವಲಯ ಅಡ್ಡೂರಿನಲ್ಲಿ ಯುವಕನೋರ್ವನ ಮೇಲೆ ತಂಡವೊಂದು ತಲವಾರು ದಾಳಿ ನಡೆಸಿದ ಬಗ್ಗೆ ವರದಿಯೊಂದು ತಿಳಿಸಿದೆ. ಮಂಗಳವಾರ ತಡರಾತ್ರಿ ಯುವಕನೊಬ್ಬನ ಮೇಲೆ ಮೂವರು ದುಷ್ಕರ್ಮಿಗಳ ತಂಡದಿಂದ ತಲವಾರು ದಾಳಿ ನಡೆದಿದೆ.

- Advertisement -

ಅಡ್ಡೂರು ನಿವಾಸಿ ಮುಹಮ್ಮದ್ ತಾಜುದ್ದೀನ್ (30) ದಾಳಿಗೊಳಗಾಗಿ ಗಾಯಗೊಂಡವರು. ತಾಜುದ್ದೀನ್ ಮಂಗಳವಾರ ತಡರಾತ್ರಿ ಅಡ್ಡೂರಿನಿಂದ ಮನೆ ಕಡೆಗೆ ತೆರಳುತ್ತಿದ್ದ ವೇಳೆ ಈ ಕೃತ್ಯ ಎಸಗಲಾಗಿದೆ. ತಾಜುದ್ದೀನ್ ನ ತೊಡೆ, ಕೈ ಸಹಿತ ಹಲವೆಡೆ ಗಾಯಗಳಾಗಿವೆ.

ಹಳೆ ವೈಷಮ್ಯದಿಂದ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ಗಾಯಗೊಂಡ ತಾಜುದ್ದೀನ್ ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯಕ್ಕೆ ಸಂಬಂಧಿಸಿ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

Join Whatsapp