ಮಂಗಳೂರು | ಬಸ್ ನಿರ್ವಾಹಕನಿಗೆ ಚೂರಿ ಇರಿತ; ಸುರತ್ಕಲ್ ವ್ಯಾಪ್ತಿಯಲ್ಲಿ ಬಿಗಿ ಭದ್ರತೆ

Prasthutha|

ಸುರತ್ಕಲ್ : ನಗರದ ಸುರತ್ಕಲ್ ಬಳಿಯ ಕಾಟಿಪಳ್ಳ ಸಮೀಪ ಬಸ್ ನಿರ್ವಾಹಕನೊಬ್ಬನಿಗೆ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಬುಧವಾರ ತಡರಾತ್ರಿ ನಡೆದಿದೆ.

- Advertisement -

ಚೂರಿ ಇರಿತಕ್ಕೊಳಗಾದವರು ಕೃಷ್ಣಾಪುರ ನಿವಾಸಿ ಜಾಬಿರ್ (20) ಎಂದು ಗುರುತಿಸಲಾಗಿದೆ. ಬೈಕ್ ಗಳಲ್ಲಿ ಬಂದ ಮೂವರು ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ.

ದಾಳಿಯಿಂದ ಜಾಬಿರ್ ಗಂಭೀರ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಘಟನೆಯ ಹಿನ್ನೆಲೆಯಲ್ಲಿ ಸುರತ್ಕಲ್, ಕೃಷ್ಣಾಪುರ, ಕಾಟಿಪಳ್ಳ,, ಕೈಕಂಬದಲ್ಲಿ ಬಿಗಿಬಂದೋಬಸ್ತ್ ಮಾಡಲಾಗಿದೆ.

ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Join Whatsapp