Home ಕರಾವಳಿ ಮಂಗಳೂರು | ಬಸ್ ನಿರ್ವಾಹಕನಿಗೆ ಚೂರಿ ಇರಿತ; ಸುರತ್ಕಲ್ ವ್ಯಾಪ್ತಿಯಲ್ಲಿ ಬಿಗಿ ಭದ್ರತೆ

ಮಂಗಳೂರು | ಬಸ್ ನಿರ್ವಾಹಕನಿಗೆ ಚೂರಿ ಇರಿತ; ಸುರತ್ಕಲ್ ವ್ಯಾಪ್ತಿಯಲ್ಲಿ ಬಿಗಿ ಭದ್ರತೆ

ಸುರತ್ಕಲ್ : ನಗರದ ಸುರತ್ಕಲ್ ಬಳಿಯ ಕಾಟಿಪಳ್ಳ ಸಮೀಪ ಬಸ್ ನಿರ್ವಾಹಕನೊಬ್ಬನಿಗೆ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಬುಧವಾರ ತಡರಾತ್ರಿ ನಡೆದಿದೆ.

ಚೂರಿ ಇರಿತಕ್ಕೊಳಗಾದವರು ಕೃಷ್ಣಾಪುರ ನಿವಾಸಿ ಜಾಬಿರ್ (20) ಎಂದು ಗುರುತಿಸಲಾಗಿದೆ. ಬೈಕ್ ಗಳಲ್ಲಿ ಬಂದ ಮೂವರು ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ.

ದಾಳಿಯಿಂದ ಜಾಬಿರ್ ಗಂಭೀರ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಹಿನ್ನೆಲೆಯಲ್ಲಿ ಸುರತ್ಕಲ್, ಕೃಷ್ಣಾಪುರ, ಕಾಟಿಪಳ್ಳ,, ಕೈಕಂಬದಲ್ಲಿ ಬಿಗಿಬಂದೋಬಸ್ತ್ ಮಾಡಲಾಗಿದೆ.

ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Join Whatsapp
Exit mobile version