Home ಜಾಲತಾಣದಿಂದ ಬಜರಂಗದಳದ ಕಾರ್ಯಕರ್ತನ ಮೇಲೆ ತಲವಾರು ದಾಳಿಗೆ ಯತ್ನ

ಬಜರಂಗದಳದ ಕಾರ್ಯಕರ್ತನ ಮೇಲೆ ತಲವಾರು ದಾಳಿಗೆ ಯತ್ನ

ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತನ ಮೇಲೆ ತಲವಾರು ದಾಳಿ ಯತ್ನ ನಡೆಸಿರುವ ಘಟನೆ ಶಿವಮೊಗ್ಗದ ಸಾಗರ ಪಟ್ಟಣದ ಬಿ.ಎಚ್.ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಹಲ್ಲೆ ನಡೆದಿದೆ ಎನ್ನಲಾಗಿದೆ.

ಬಜರಂಗದಳದ ಕಾರ್ಯಕರ್ತ ಸುನೀಲ್ ಮೇಲೆ ಆತನ ಪರಿಚಯಸ್ಥನೇ ಆಗಿರುವ ಸಮೀರ್ ದಾಳಿಗೆ ಯತ್ನಿಸಿದ್ದಾನೆ. ಆದರೆ ದಾಳಿ ಗುರಿ ತಪ್ಪಿದ್ದರಿಂದ ಸುನೀಲ್ ಬಚಾವಾಗಿದ್ದಾನೆ. ಈ ಬಗ್ಗೆ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುನೀಲ್ ಮತ್ತು ಸಮೀರ್ ಸಾಗರ ಸಮೀಪದ ನೆಹರೂ ನಗರದ ನಿವಾಸಿಗಳು ಎಂದು ತಿಳಿದುಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ಸಂಘಪರಿವಾರದ ಕಾರ್ಯಕರ್ತರು, ಸಾಗರ ಟೌನ್ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದರು.

ಭಾನುವಾರ ಶಿಮಮೊಗ್ಗದಲ್ಲಿ ಬಜರಂಗದಳದಿಂದ ಶೌರ್ಯ ಪಥ ಸಂಚಲನ ನಡೆದಿತ್ತು. ಈ ವೇಳೆ ಸುನಿಲ್ ಯಾತ್ರೆ ಮುಗಿಸಿ ಹೋಗುವಾಗ ಸಮೀರ್ ಜೊತೆ ಕಿರಿಕ್ ಮಾಡಿದ್ದಾನೆ. ಇಂದು ಬೆಳಗ್ಗೆ ಸುನೀಲ್ ತನ್ನ ಕಚೇರಿ ಬಳಿಯಿಂದ ಮನೆಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಸಮೀರ್ ದಾಳಿಗೆ ಯತ್ನಿಸಿದ್ದಾನೆ ಎನ್ನಲಾಗಿದೆ.

Join Whatsapp
Exit mobile version